ಕಾಡ್ಗಿಚ್ಚಿನಂತೆ ಹಬ್ಬಿತು ಹಿರಿಯ ನಟಿ ಜಯಂತಿ ಸಾವಿನ ಸುದ್ದಿ!

ಬುಧವಾರ, 28 ಮಾರ್ಚ್ 2018 (10:04 IST)
ಬೆಂಗಳೂರು: ಖ್ಯಾತ ತಾರೆಯರ ಸಾವಿನ ಸುಳ್ಳು ಸುದ್ದಿಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಸಮಸ್ಯೆ ಸೃಷ್ಟಿಸುವುದು ಹೊಸದಲ್ಲ. ಇದೀಗ ಉಸಿರಾಟದ ಸಮಸ್ಯೆಯಿಂದ ಆಸ್ಪತ್ರೆ ಸೇರಿರುವ ಹಿರಿಯ ನಟಿ ಜಯಂತಿ ವಿಚಾರದಲ್ಲೂ ಹಾಗೆಯೇ ಆಗಿದೆ.

ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಯಂತಿ ಸ್ಥಿತಿ ಇದೀಗ ಸ್ಥಿರವಾಗಿದೆ. ಆದರೆ ನಟಿ ಜಯಂತಿ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಇದನ್ನು ನಂಬಿ ಹಲವರು ಅಂತಿಮ ಸಂದೇಶ ಬರೆದು ತಮ್ಮ ಸಂತಾಪ ವ್ಯಕ್ತಪಡಿಸಿದ್ದೂ ಆಗಿದೆ.

ಇಷ್ಟೆಲ್ಲಾ ಅವಾಂತರವಾದ ಮೇಲೆ ತಕ್ಷಣ ಎಚ್ಚೆತ್ತುಕೊಂಡ ಜಯಂತಿ ಪುತ್ರ ಕೃಷ್ಣ ಕುಮಾರ್, ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಹಿರಿಯ ನಟಿ ಆರೋಗ್ಯ ಸ್ಥಿರವಾಗಿದೆ. ಚೇತರಿಸಿಕೊಳ್ಳುತ್ತಿದ್ದಾರೆ. ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಸಂಜೆ ವಾರ್ಡ್ ಶಿಫ್ಟ್ ಮಾಡುವ ಸಾಧ್ಯತೆಯಿದೆ. ಅವರ ಬಗ್ಗೆ ಬಂದ ಸುದ್ದಿಗಳೆಲ್ಲಾ ಸುಳ್ಳು ಎಂದು ಸ್ಪಷ್ಟನೆ ನೀಡಿ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ