ಉತ್ತರಕಾಂಡ ಸಿನಿಮಾಗೂ ಕೈಕೊಟ್ಟ ನಟಿ ರಮ್ಯಾ

Krishnaveni K

ಮಂಗಳವಾರ, 26 ಮಾರ್ಚ್ 2024 (17:07 IST)
Photo Courtesy: Twitter
ಬೆಂಗಳೂರು: ಮೋಹಕತಾರೆ ರಮ್ಯಾ ಉತ್ತರಕಾಂಡ ಸಿನಿಮಾ ಮೂಲಕ ನಟನೆಗೆ ಕಮ್ ಬ್ಯಾಕ್ ಮಾಡಲಿದ್ದಾರೆ ಎಂದು ಈ ಮೊದಲು ಘೋಷಿಸಿದ್ದರು. ಆದರೆ ಇದೀಗ ಸಿನಿಮಾದಿಂದ ಹೊರಬಂದಿದ್ದಾರೆ.

ಡಾಲಿ ಧನಂಜಯ್ ನಾಯಕರಾಗಿರುವ ಉತ್ತರಕಾಂಡ ಸಿನಿಮಾದಲ್ಲೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಕೂಡಾ ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಮೂಲಕ ರಮ್ಯಾ ಮತ್ತೆ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಡಲು ಸಿದ್ಧತೆ ನಡೆಸಿದ್ದರು. ಸಿನಿಮಾದ ಮುಹೂರ್ತ ಕಾರ್ಯಕ್ರಮದಲ್ಲೂ ಭಾಗಿಯಾಗಿದ್ದರು.

ಆದರೆ ಇದೀಗ ಈ ಸಿನಿಮಾದಿಂದ ಹೊರಬಂದಿರುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಆ ಮೂಲಕ ಅವರ ಕಮ್ ಬ್ಯಾಕ್ ಎದಿರು ನೋಡುತ್ತಿದ್ದ ಫ್ಯಾನ್ಸ್ ಗೆ ನಿರಾಸೆ ಆಗಿದೆ. ಈ ಮೊದಲು ರಾಜ್ ಬಿ ಶೆಟ್ಟಿ ನಿರ್ದೇಶಿಸಿ, ನಟಿಸಿದ್ದ ‘ಸ್ವಾತಿ ಮುತ್ತಿನ ಮಳೆ ಹನಿಯೆ’ ಸಿನಿಮಾದಲ್ಲೂ ರಮ್ಯಾ ಕೊನೆಯ ಕ್ಷಣದಲ್ಲಿ ಹಿಂದೆ ಸರಿದಿದ್ದರು. ಬಳಿಕ ಆ ಸಿನಿಮಾದ ನಿರ್ಮಾಪಕಿಯಾಗಿದ್ದರು.

ಆದರೆ ಈಗ ಉತ್ತರಕಾಂಡದಿಂದಲೂ ಹೊರಬಂದಿದ್ದಾರೆ. ‘ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಉತ್ತರಕಾಂಡ ಸಿನಿಮಾದಲ್ಲಿ ನಾನು ನಟಿಸುತ್ತಿಲ್ಲ. ನನ್ನ ಸಿನಿಮಾ ಮತ್ತು ರಾಜಕೀಯ ಕೆಲಸಗಳನ್ನು ಸದ್ಯಕ್ಕೆ ಕಾದಿರಿಸಿದ್ದೇನೆ. ಚಿತ್ರತಂಡಕ್ಕೆ ಶುಭವಾಗಲಿ’ ಎಂದು ಬರೆದುಕೊಂಡಿದ್ದಾರೆ. ಈ ನಡುವೆ ರಮ್ಯಾ ಲೋಕಸಭೆ ಚುನಾವಣೆ ಪ್ರಚಾರಕ್ಕಿಳಿಯುತ್ತಾರೆ ಎಂಬ ಸುದ್ದಿಗಳಿತ್ತು. ಅದೇ ಕಾರಣಕ್ಕೆ ಸಿನಿಮಾದಿಂದ ಹೊರಬಂದಿದ್ದಾರಾ ಗೊತ್ತಿಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ