ಅಲ್ಲು ಅರ್ಜುನ್ ಗೆ ಬೆನ್ನು ನೋವು: ಪುಷ್ಪ 2 ಶೂಟಿಂಗ್ ಸ್ಥಗಿತ

ಶನಿವಾರ, 2 ಡಿಸೆಂಬರ್ 2023 (17:00 IST)
ಹೈದರಾಬಾದ್: ಪುಷ್ಪ 2 ಶೂಟಿಂಗ್ ನಲ್ಲಿ ಭಾಗಿಯಾಗಿದ್ದ ನಟ ಅಲ್ಲು ಅರ್ಜುನ್ ಗೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದೆ. ಹೀಗಾಗಿ ಶೂಟಿಂಗ್ ಗೆ ಬ್ರೇಕ್ ನೀಡಲಾಗಿದೆ.

ಪುಷ್ಪ 2 ಶೂಟಿಂಗ್ ಹೈದರಾಬಾದ್ ನಲ್ಲಿ ನಡೆಯುತ್ತಿದ್ದು, ಪ್ರಮುಖ ಸಾಹಸ ದೃಶ್ಯವೊಂದರ ಚಿತ್ರೀಕರಣಕ್ಕೆ ನಿರ್ದೇಶಕ ಸುಕುಮಾರ್ ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಈ ನಡುವೆ ಅಲ್ಲು ಅರ್ಜುನ್ ಗೆ ಬೆನ್ನು ನೋವು ಕಾಣಿಸಿಕೊಂಡಿದ್ದರಿಂದ ಶೂಟಿಂಗ್ ಸ್ಥಗಿತಗೊಳಿಸಲಾಗಿದೆ.

ಸತತ ಶೂಟಿಂಗ್ ನಿಂದ ಬಳಲಿರುವ ಅವರಿಗೆ ಈ ರೀತಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ ಎನ್ನಲಾಗಿದೆ. ಹೀಗಾಗಿ ಎರಡು ವಾರಗಳ ಬ್ರೇಕ್ ನೀಡಲು ನಿರ್ದೇಶಕರು ತೀರ್ಮಾನಿಸಿದ್ದಾರೆ.

ಅನಾರೋಗ್ಯದಿಂದಾಗಿ ನೇರವಾಗಿ ಅಲ್ಲು ಅರ್ಜುನ್ ಆಸ್ಪತ್ರೆಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ. ಅವರ ಅನಾರೋಗ್ಯದ ಬಗ್ಗೆ ಅಭಿಮಾನಿಗಳು ಆತಂಕಗೊಂಡಿದ್ದು, ಅಪ್ ಡೇಟ್ ಗಾಗಿ ಕಾಯುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ