ಸ್ಯಾಂಡಲ್ ವುಡ್ ನಟಿ ಆಶಿಕಾ ರಂಗನಾಥ್ ಬಗ್ಗೆ ಹರಿದಾಡುತ್ತಿದೆ ಹೀಗೊಂದು ಸುದ್ದಿ!

ಸೋಮವಾರ, 16 ಡಿಸೆಂಬರ್ 2019 (09:24 IST)
ಬೆಂಗಳೂರು: ನಟಿ ಆಶಿಕಾ ರಂಗನಾಥ್ ಬಗ್ಗೆ ಗಾಳಿ ಸುದ್ದಿಯೊಂದು ಹರಿದಾಡುತ್ತಿದೆ. ಆದರೆ ಇದು ಎಷ್ಟರ ಮಟ್ಟಿಗೆ ನಿಜ ಎಂದು ಅವರೇ ಹೇಳಬೇಕಾಗಿದೆ.


ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಮಹೇಶ್ ಬಾಬು ಜತೆಗೆ ತೆಲುಗು ಸಿನಿಮಾವೊಂದನ್ನು ಮಾಡಲಿದ್ದಾರೆ ಎಂಬ ಸುದ್ದಿಯಿತ್ತು. ಕೆಜಿಎಫ್ 2 ಬಳಿಕ ಪ್ರಶಾಂತ್ ಆ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ ಎಂಬ ಸುದ್ದಿ ಬಂದಿತ್ತು.

ಆ ಸಿನಿಮಾಗೆ ಆಶಿಕಾ ರಂಗನಾಥ್ ನಾಯಕಿಯಾಗಲಿದ್ದಾರೆ ಎಂಬ ಸುದ್ದಿ ಈಗ ಹರಿದಾಡುತ್ತಿದೆ. ಆಶಿಕಾ ಅಭಿಮಾನಿಗಳಂತೂ ಮಹೇಶ್ ಬಾಬುಗೆ ನಾಯಕಿಯಾಗುವ ಮೂಲಕ ಆಶಿಕಾ ಟಾಲಿವುಡ್ ಗೆ ಭರ್ಜರಿ ಎಂಟ್ರಿ ಕೊಡಲಿದ್ದಾರೆ ಎನ್ನುತ್ತಿದ್ದಾರೆ. ಆದರೆ ಈ ಸುದ್ದಿ ನಿಜವಾ ಎಂದು ಅವರೇ ಹೇಳಬೇಕು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ