ದಸರಾ ಸಿನಿಮೋತ್ಸವಕ್ಕೆ ಚಾಲನೆ ನೀಡುವಾಗ ಕಣ್ಣೀರಾದ ಅಶ್ವಿನಿ ಪುನೀತ್ ರಾಜ್ ಕುಮಾರ್

ಬುಧವಾರ, 28 ಸೆಪ್ಟಂಬರ್ 2022 (18:05 IST)
ಬೆಂಗಳೂರು: ಪತಿ ಪುನೀತ್ ರಾಜ್ ಕುಮಾರ್ ಅಗಲುವಿಕೆಯ ನೋವು ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಕಾಡುತ್ತಲೇ ಇದೆ.

ಇಂದು ಮೈಸೂರಿನಲ್ಲಿ ದಸರಾ ಸಿನಿಮೋತ್ಸವಕ್ಕೆ ಚಾಲನೆ ನೀಡಲು ಅಶ್ವಿನಿ ಮುಖ್ಯ ಅತಿಥಿಯಾಗಿ ಬಂದಿದ್ದರು. ಈ ವೇಳೆ ಪುನೀತ್ ಭಾವಚಿತ್ರಕ್ಕೆ ನಮನ ಸಲ್ಲಿಸುವಾಗ ಪತಿಯ ನೆನೆದು ಅಶ್ವಿನಿ ಕಣ್ಣೀರು ಹಾಕಿದ್ದಾರೆ.

ದಸರಾ ಸಿನಿಮೋತ್ಸವದಲ್ಲಿ ಪುನೀತ್ ರಾಜ್ ಕುಮಾರ್ ಗೆ ವಿಶೇಷ ಗೌರವ ಸಲ್ಲಿಸಲಾಗಿದೆ. ಹಲವು ಕನ್ನಡ ಸಿನಿಮಾಗಳು ಪ್ರದರ್ಶನಗೊಳ್ಳಲಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ