ಚಾಲೆಂಜಿಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರ ಸಂಕಷ್ಟ

ಸೋಮವಾರ, 18 ಡಿಸೆಂಬರ್ 2023 (16:45 IST)
ವನ್ಯ ಜೀವಿ ಸಂರಕ್ಷಣಾ ಒಕ್ಕೂಟದಿಂದ ದರ್ಶನ್ ಮೇಲೆ ಗರಂ ಆಗಿದ್ದು,ವನ್ಯ ಜೀವಿಗಳ ಬಗ್ಗೆ ಟ್ರೈಲರ್ ನಲ್ಲಿ ಇರುವ ಸಂಭಾಷಣೆ ಬಗ್ಗೆ ವನ್ಯ ಜೀವಿ ಸಂರಕ್ಷಣಾ ಒಕ್ಕೂಟ ಅಸಮಾಧಾನ ಹೊರಹಾಕಿದೆ."ಇವರೆಲ್ಲಾ ಹಾವು ಇದ್ದಂಗೆ. ವಿಷ ಇಲ್ಲಾಂದ್ರೆ ಹಿಡಿಬೇಕು. ವಿಷ ಇದ್ರೆ ಹೊಡಿಬೇಕು".ಈ ಹೇಳಿಕೆ ಅಭಿಮಾನಿಗಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.

ಈಗಾಗಲೇ ಅಳಿವನ ಅಂಚಿನಲ್ಲಿರುವ ವಿಷಕಾರಿ ಹಾವುಗಳ ಸಂರಕ್ಷಣೆಗೆ 2021ರಲ್ಲಿ ಕಾನೂನು ರೂಪಿಸಲಾಗಿದೆ.ವಿಷಕಾರಿ ಹಾವುಗಳನ್ನು ಉಳಿಸಿಕೊಂಡು ಹೋಗಬೇಕೇ ಹೊರತು ಹೊಡೆದು ಕೊಲ್ಲೋಕೆ ಪ್ರಚೋದನೆ ನೀಡಬಾರದು.ರಾಜ್ಯಪಾಲರಿಗೆ ಹಾಗೂ ಸಿಎಂ ಸಿದ್ದುಗೆ ಮೇಲ್ ಮೂಲಕ  ವನ್ಯ ಜೀವಿ ಸಂರಕ್ಷಣಾ ಒಕ್ಕೂಟ ದೂರು ನೀಡಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ