ಚಾಮುಂಡೇಶ್ವರಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಲಿ, ದರ್ಶನ್ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಉಮಾಪತಿ ಶ್ರೀನಿವಾಸ್

Sampriya

ಗುರುವಾರ, 5 ಸೆಪ್ಟಂಬರ್ 2024 (16:22 IST)
Photo Courtesy X
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್ ವಿರುದ್ಧ ಆಕ್ರೋಶ ಹೊರಹಾಕಿದ್ದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರು ಇದೀಗ ತಪ್ಪು ಮಾಡಿದವರಿಗೆ ಚಾಮುಂಡೇಶ್ವರಿ ಶಿಕ್ಷೆ ನೀಡಲಿ. ತಪ್ಪು ಮಾಡಿಲ್ಲ ಅಂದರೆ ಪ್ರಕರಣದಿಂದ ಆಚೆ ಬರಲಿ ಹೇಳಿದ್ದಾರೆ.

ಸುದ್ದಿಗೋಷ್ಠಿಯೊಂದರಲ್ಲಿ ದರ್ಶನ್  ಬಗ್ಗೆ ಉಮಾಪತಿ ಪ್ರತಿಕ್ರಿಯಿಸಿ, ಮಾನವೀಯತೆಯಿಂದ ನೋಡುವುದಾದರೆ ಇದು ಖಂಡಿತಾ ತಪ್ಪು. ಈಗಾಗಲೇ ಆರೋಪಿಗಳ ವಿರುದ್ಧದ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗಿದೆ. ಸತ್ಯಾಸತ್ಯತೆ ಆಚೆ ಬರುತ್ತದೆ. ಇನ್ನೂ ನಾನು ಯಾರ ಶೋಲ್ಡರ್ ಮೇಲೂ ಗನ್ ಇಟ್ಟು ಹೊಡಿಯೋಕೆ ಹೋಗಲ್ಲ. ಏನೇ ಇದ್ದರೂ ನೇರಾನೇರ ಮಾತನಾಡುತ್ತೇನೆ ಎಂದಿದ್ದಾರೆ.

ನನ್ನ ಬಗ್ಗೆ ಕೆಟ್ಟ ಕಮೆಂಟ್ ಮಾಡಿದವರ ವಿರುದ್ಧ ದೂರು ಕೊಟ್ಟೆ ಅಷ್ಟೇ. ಒಂದು ಹಾಳೆ ಮತ್ತು ಪೆನ್‌ನಲ್ಲಿ ಆಗುವ ಕೆಲಸವದು. ನಾನು ಸಾಧಿಸುವುದಕ್ಕಾಗಿ ಹುಟ್ಟಿದ್ದೇನೆ, ಸಾಯೋದಕ್ಕೆ ಅಲ್ಲ. ಗಾಡ್ ಫಾದರ್ ಇಲ್ಲದೇ ಚಿತ್ರರಂಗಕ್ಕೆ ಬಂದಿದ್ದೇನೆ. ಚಾಮುಂಡೇಶ್ವರಿ ತಪ್ಪು ಮಾಡಿದವರಿಗೆ ಶಿಕ್ಷೆ ಕೊಡಲಿ ಮಾಡಿಲ್ಲ ಅಂದರೆ ಆಚೆ ಬರಲಿ ಎಂದರು.

ಕೆಟ್ಟ ಕಮೆಂಟ್ ಮಾಡಿದ ಎನ್ನುವ ವಿಚಾರಕ್ಕೆ ಇಂದು ಎಷ್ಟು ಕುಟುಂಬಗಳು ಅನಾಥವಾಗಿದೆ.  ದರ್ಶನ್ ನನಗೆ ವೈರಿಯಂತಲ್ಲ. ಅವರ ಮೇಲೆ ವೈಯಕ್ತಿಕ ದ್ವೇಷವಿಲ್ಲ ಎಂದು ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ