ಚಾರ್ಜ್ ಶೀಟ್ ಸಲ್ಲಿಕೆ ಬೆನ್ನಲ್ಲೇ ದರ್ಶನ್ ಗೆ ಟೆನ್ಷನ್: ಜೈಲು ಅಧಿಕಾರಿಗಳ ಮುಂದೆ ಮತ್ತೊಂದು ಬೇಡಿಕೆ

Krishnaveni K

ಬುಧವಾರ, 4 ಸೆಪ್ಟಂಬರ್ 2024 (11:38 IST)
ಬೆಂಗಳೂರು: ಒಂದೆಡೆ ಪೊಲೀಸರು ರೇಣುಕಾಸ್ವಾಮಿ ಮರ್ಡರ್ ಕೇಸ್ ಗೆ ಸಂಬಂಧಪಟ್ಟಂತೆ ಚಾರ್ಜ್ ಶೀಟ್ ಸಲ್ಲಿಕೆ ಮಾಡುತ್ತಿದ್ದಂತೆ ಇತ್ತ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ಗೆ ಟೆನ್ಷನ್ ಶುರುವಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆದ ಹಿನ್ನಲೆಯಲ್ಲಿ ದರ್ಶನ್ ರನ್ನು ಬಳ್ಳಾರಿ ಜೈಲಿಗೆ ವರ್ಗಾಯಿಸಲಾಗಿತ್ತು. ದರ್ಶನ್ ಈ ಜೈಲಿನಲ್ಲಿ ಏಕಾಂಗಿಯಾಗಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಂತೆ ಇಲ್ಲಿ ಅವರಿಗೆ ಯಾವುದೇ ವಿಶೇಷ ಸೌಲಭ್ಯಗಳು ಸಿಗುತ್ತಿಲ್ಲ. ಟಿವಿ ವ್ಯವಸ್ಥೆಯೂ ಇಲ್ಲ.

ಹೀಗಾಗಿ ದರ್ಶನ್ ಗೆ ಚಾರ್ಜ್ ಶೀಟ್ ನಲ್ಲಿ ಏನಾಗುತ್ತಿದೆ ಎಂಬ ಆತಂಕ ಶುರುವಾಗಿದೆ. ಈ ಕಾರಣಕ್ಕೆ ತಮ್ಮ ಮನೆಗೆ ಕರೆ ಮಾಡಿ ವಿಷಯ ತಿಳಿದುಕೊಳ್ಳಲು ಹಂಬಲಿಸುತ್ತಿದ್ದಾರೆ. ಇದಕ್ಕಾಗಿ ಫೋನ್ ಮಾಡಲು ಅವಕಾಶ ಕೊಡಿ ಎಂದು ಜೈಲು ಅಧಿಕಾರಿಗಳಿಗೆ ಮನವಿ ಮಾಡುತ್ತಿದ್ದಾರಂತೆ.

ವಿಚಾರಣಾಧೀನ ಖೈದಿಗಳಿಗೆ ವಾರದಲ್ಲಿ ಮೂರು ಬಾರಿ ಕರೆ ಮಾಡಲು ಅವಕಾಶವಿದೆ. ಈ ಸಂಖ್ಯೆಗಳನ್ನು ಮೊದಲೇ ಜೈಲು ಅಧಿಕಾರಿಗಳಿಗೆ ನೀಡಬೇಕಾಗುತ್ತದೆ. ಅದರಂತೆ ದರ್ಶನ್ ಈಗ ಚಾರ್ಜ್ ಶೀಟ್ ನಲ್ಲಿ ಏನೆಲ್ಲಾ ಉಲ್ಲೇಖವಾಗಿದೆ ಎಂದು ತಿಳಿದುಕೊಳ್ಳಲು ಮನೆಗೆ ಕರೆ ಮಾಡಲು ಬಯಸುತ್ತಿದ್ದಾರೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ