ಜೈಲಿನಲ್ಲಿ ದರ್ಶನ್‌ಗೆ ಮತ್ತೇ ಮತ್ತೇ ಕಾಡುತ್ತಿದೆಯಾ ಜ್ವರ

Sampriya

ಮಂಗಳವಾರ, 23 ಜುಲೈ 2024 (16:30 IST)
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ತಿಳಿದುಬಂದಿದೆ. ಅನಾರೋಗ್ಯದ ಹಿನ್ನೆಲೆ ಹಿರಿಯ ವೈದ್ಯರಿಂದ ದರ್ಶನ್‌ಗೆ ಜೈಲಿನಿಂದಲೇ ಚಿಕಿತ್ಸೆಯನ್ನು ನೀಡಲಾಗಿದೆ ಎಂಬ ಮಾಹಿತಿಯಿದೆ.

ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರು ದೈಹಿಕವಾಗಿ ಕುಗ್ಗಿ ಹೋಗಿದ್ದಾರೆ. ಹೊರಗಡೆ ಇದ್ದಾಗ ಸೆಲೆಬ್ರಿಟಿಯಾಗಿ ಐಷಾರಾಮಿ ಜೀವನ ನಡೆಸಿದ ದರ್ಶನ್​ ಅವರು ಈಗ ಜೈಲಿಯಲ್ಲಿ ಕಷ್ಟಪಡುತ್ತಿದ್ದಾರೆ. ಮುಖ್ಯವಾಗಿ ಜೈಲಿನ ಊಟಕ್ಕೆ ಹೊಂದಲು ಕಷ್ಟ ಪಡುತ್ತಿರುವ ದರ್ಶನ್ ಅವರಿಗೆ ಮನೆಯಿಂದ ಊಟ ತರಿಸಲು ಅವಕಾಶ ನೀಡಬೇಕು ಎಂದು ನ್ಯಾಯಾಲಯಕ್ಕೆ ದರ್ಶನ್ ಮನವಿ ಮಾಡಿದ್ದಾರೆ.

ಇದೀಗ ದರ್ಶನ್ ಅವರಿಗೆ ಜ್ವರ ಕಾಣಿಸಿಕೊಂಡ ಮಾಹಿತಿಯಿದೆ. ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಕಳೆದ ಮೂರು ದಿನಗಳಿಂದ ಆರೋಗ್ಯ ಕೈಕೊಟ್ಟಿದೆ. ಜ್ವರದಿಂದ ಬಳಲುತ್ತಿದ್ದ ನಟನಿಗೆ ಜೈಲಿನ ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ಕೊಡಿಸಿದ್ದಾರೆ ಅಧಿಕಾರಿಗಳು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ