ನಟ ದರ್ಶನ್ ಗೆ ಪಶ್ಚಾತ್ತಾಪವಾಗಿದೆ ಎಂಬುದೆಲ್ಲಾ ಸುಳ್ಳೇ ಸುಳ್ಳು

Krishnaveni K

ಗುರುವಾರ, 25 ಜುಲೈ 2024 (12:05 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಗೆ ಈಗ ಪಶ್ಚಾತ್ತಾಪ ಕಾಡುತ್ತಿದೆ ಎಂದು ಸುದ್ದಿ ಹರಿದಾಡುತ್ತಿದೆ. ಆದರೆ ಅದೆಲ್ಲಾ ಸುಳ್ಳು ಎಂದು ಜೈಲು ಅಧಿಕಾರಿಯೊಬ್ಬರು ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಬಹಿರಂಗಪಡಿಸಿದ್ದಾರೆ.

ದರ್ಶನ್ ಭೇಟಿ ಮಾಡಿದ್ದ ಸಿದ್ದರೂಢ ಎಂದ ಕೈದಿಯೊಬ್ಬರು ಇತ್ತೀಚೆಗೆ ಸಂದರ್ಶನದಲ್ಲಿ ದರ್ಶನ್ ಸರ್ ಗೆ ಈಗ ಪಶ್ಚಾತ್ತಾಪ ಕಾಡುತ್ತಿದೆ. ಅವರ ಕಣ್ಣಲ್ಲೇ ಅದು ಕಾಣಿಸುತ್ತಿದೆ ಎಂದೆಲ್ಲಾ ಹೇಳಿದ್ದರು. ಅವರನ್ನು ಭೇಟಿ ಮಾಡಿಕೊಂಡು ಬಂದ ಅನೇಕ ವಿಐಪಿಗಳೂ ಇದೇ ಮಾತು ಹೇಳುತ್ತಿದ್ದಾರೆ.

ಆದರೆ ಅದೆಲ್ಲಾ ಸುಳ್ಳು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ದರ್ಶನ್ ತಪ್ಪು ಮಾಡಿದ್ದಾರೆಂಬ ಆರೋಪದಲ್ಲಿ ಜೈಲು ಸೇರಿದ್ದಾರೆ. ಅವರಲ್ಲಿ ಅವರ ವರ್ತನೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದಿದ್ದಾರೆ. ನಿವೃತ್ತ ಜೈಲು ಅಧಿಕಾರಿ ಸತೀಶ್ ಎಂಬವರು ಈ ಹಿಂದೆ ಪತ್ನಿ ಮೇಲೆ ಹಲ್ಲೆ ನಡೆಸಿ ದರ್ಶನ್ ಜೈಲು ಸೇರಿದಾಗ ಅವರನ್ನು ನೋಡಿದ್ದರು.

ಆಗ ದರ್ಶನ್ ಹೆಂಡತಿ ಬಳಿ ಕ್ಷಮೆ ಕೇಳುವುದಾಗಿ ಹೇಳಿದ್ದರು. ಇನ್ನು ಮುಂದೆ ಆ ರೀತಿ ಯಾವುದೇ ತಪ್ಪು ಮಾಡುವುದಿಲ್ಲ ಎಂದಿದ್ದರು. ಆದರೆ ಅವರ ವರ್ತನೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ ಎಂದಿದ್ದಾರೆ. ಅಲ್ಲದೆ ಈಗ ದರ್ಶನ್ ಮನೆ ಊಟಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೆ ಆ ಸೌಲಭ್ಯ ಅವರಿಗೆ ಕೊಡಬಾರದು. ಹಾಗೆ ಕೊಟ್ಟರೆ ಬೇರೆಯವರೂ ಕೇಳುತ್ತಾರೆ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ