ರಾಜಕೀಯ ನಾಯಕರೊಂದಿಗೆ ಡಿ ಬಾಸ್ ದರ್ಶನ್ ಔತಣಕೂಟ

ಬುಧವಾರ, 27 ಜನವರಿ 2021 (10:43 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಚುನಾವಣೆಯಲ್ಲಿ ತಮ್ಮ ಆತ್ಮೀಯರ ಪರ ಪ್ರಚಾರ ನಡೆಸಿದ್ದು ಬಿಟ್ಟರೆ ರಾಜಕೀಯದಿಂದ ದೂರವೇ ಇದ್ದಾರೆ. ಆದರೆ ಇದೀಗ ರಾಜಕೀಯ ನಾಯಕರ ಜೊತೆಗೆ ಔತಣಕೂಟದಲ್ಲಿ ಭಾಗಿಯಾಗಿ ಸುದ್ದಿಯಾಗಿದ್ದಾರೆ.


ವಿಧಾನಪರಿಷತ್ ಸದಸ್ಯ ಸಿಆರ್ ಮನೋಹರ್ ತಮ್ಮ ಫಾರಂ ಹೌಸ್ ನಲ್ಲಿ ಆಯೋಜಿಸಿದ್ದ ಔತಣಕೂಟದಲ್ಲಿ ದರ್ಶನ್ ಭಾಗಿಯಾಗಿದ್ದಾರೆ. ಈ ಔತಣಕೂಟಕ್ಕೆ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್ ಕೂಡಾ ಆಗಮಿಸಿದ್ದರು. ಇವರೊಂದಿಗಿನ ಆತ್ಮೀಯ ಕ್ಷಣದ ಫೋಟೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆದರೆ ಇದರಲ್ಲಿ ರಾಜಕೀಯ ಉದ್ದೇಶವೇನೂ ಇಲ್ಲ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ