ಸುಪ್ರೀಂ ಆದೇಶದ ಆತಂಕದ ಬೆನ್ನಲ್ಲೇ ನಾಡದೇವಿಯ ಮೊರೆ ಹೋದ ದರ್ಶನ್ ತೂಗುದೀಪ್
ಿನ್ನೂ ಥೈಲ್ಯಾಂಡ್ನಲ್ಲಿ ಡೆವಿಲ್ ಶೂಟಿಂಗ್ ಮುಗಿಸಿ ಈಚೆಗೆ ವಾಪಾಸ್ಸಾಗಿದ್ದ ದರ್ಶನ್ ಅವರು ಅದರ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮಿ ಜತೆ ಅಸ್ಸಾಂನ ಗುವಾಹಟಿಯ ಕಾಮಾಕ್ಯದೇವಿ ದರ್ಶನ ಮಾಡಿ ಬಂದಿದ್ದರು.
ಸಾಮಾನ್ಯವಾಗಿ ದರ್ಶನ್ ಆಷಾಢ ಮಾಸದ ಶುಕ್ರವಾರ ಹಾಗೂ ಮೈಸೂರಿನಲ್ಲಿ ಚಿತ್ರೀಕರಣ ಹೊರತಾಗಿ ಚಾಮುಂಡಿ ಬೆಟ್ಟಕ್ಕೆ ಭೇಟಿ ಕೊಡೋದಿಲ್ಲ. ಆದರೀಗ ಶ್ರಾವಣ ಮಾಸದ ಬುಧವಾರ ದಿಢೀರ್ ಚಾಮುಂಡಮ್ಮನ ಆಶೀರ್ವಾದ ಬೇಡಿರುವುದು ವಿಶೇಷ.