ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಸ್ಥಳಾಂತರಕ್ಕೆ ಶುರುವಾಗಿದೆ ಪ್ಲ್ಯಾನ್
ಆದರೆ ದರ್ಶನ್ ರನ್ನು ಮತ್ತೆ ಬಳ್ಳಾರಿ ಜೈಲಿಗೇ ಕಳುಹಿಸಲು ಪ್ರಾಸಿಕ್ಯೂಷನ್ ಪರ ಅಭಿಯೋಜಕರು ಸೆಷನ್ಸ್ ಕೋರ್ಟ್ ಗೆ ಮನವಿ ಮಾಡಿದ್ದಾರೆ. ಒಂದು ವೇಳೆ ಅವರ ಮನವಿ ನ್ಯಾಯಾಲಯ ಪುರಸ್ಕರಿಸಿದರೆ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಲಿದ್ದಾರೆ.
ಆದರೆ ಬಳ್ಳಾರಿ ಜೈಲಿಗೆ ಶಿಫ್ಟ್ ಆದರೆ ಅವರನ್ನು ಆಗಾಗ ಭೇಟಿ ಮಾಡಲು ಕುಟುಂಬಸ್ಥರಿಗೆ ಕಷ್ಟವಾಗಲಿದೆ. ಹೀಗಾಗಿ ದರ್ಶನ್ ಪರ ವಕೀಲರು ಅವರನ್ನು ಬೆಂಗಳೂರಿನಲ್ಲಿಯೇ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದ್ದಾರೆ. ಇದರಿಂದ ತನಿಖೆಗೂ ಅನುಕೂಲವಾಗುತ್ತದೆ ಎಂದು ವಕೀಲರು ವಾದ ಮಂಡಿಸಬಹುದು.