ಜನಪ್ರಿಯತೆ ನೆತ್ತಿಗೇರಿ ದರ್ಶನ್‌ ದಾರಿ ತಪ್ಪಿದ್ದು: ನಟಿ ರಮ್ಯಾ ಆಕ್ರೋಶ

sampriya

ಶನಿವಾರ, 15 ಜೂನ್ 2024 (15:08 IST)
Photo By X

ನವದೆಹಲಿ: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್‌ ವಿರುದ್ಧ ಕಿಡಿಕಾರಿದ್ದ ನಟಿ ರಮ್ಯಾ ಅವರು ಇದೀಗ ಅವರ ಅಭಿಮಾನಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಮಾಧ್ಯಮವೊಂದಕ್ಕೆ ದರ್ಶನ್‌ ಬಂಧನದ ಬಗ್ಗೆ ಪ್ರತಿಕ್ರಿಯಿಸಿದ ರಮ್ಯಾ ಅವರು, ದರ್ಶನ್‌ಗೆ ದೊಡ್ಡ ಅಭಿಮಾನಿಗಳ ಬಳಗವಿದೆ ಎಂದು ಬಿಂಬಿಸಲಾಗಿದೆ ಹೊರತು ಅವರಿಗೆ ಅಷ್ಟೊಂದು ಅಭಿಮಾನಿಗಳಲಿಲ್ಲ.  ಆತನಿಗೆ ಸಿಕ್ಕಿರುವ ಜನಪ್ರಿಯತೆ ನೆತ್ತಿಗೇರಿದ್ದರಿಂದ ಈ ರೀತಿಯ ಅಪರಾಧ ಪ್ರಕರಣಗಳು ನಡೆಯುತ್ತಿರುವುದಕ್ಕೆ ಸಾಕ್ಷಿ ಎಂದರು.

ಈ ಹಿಂದೆಯೂ ಅಪರಾಧ ಕೃತ್ಯಗಳಲ್ಲಿ ದರ್ಶನ್‌ ತೊಡಗಿಸಿಕೊಂಡಿದ್ದರಿಂದ ಪದೇ ಪದೇ ಅಪರಾಧ ಕೃತ್ಯಗಳನ್ನು ಮಾಡುತ್ತಿದ್ದಾರೆ. ಇನ್ನೂ ದರ್ಶನ್‌ ಅಭಿಮಾನಿ ಬಳಗದ ಬಗ್ಗೆ ಮಾತನಾಡಿದ ಅವರು, ‘ಕಳೆದ ಚುನಾವಣೆಯಲ್ಲಿ ಒಂದೆರಡು ಅಭ್ಯರ್ಥಿಗಳ ಪರ ದರ್ಶನ್ ಪ್ರಚಾರ ಮಾಡಿದ್ದರು, ಅವರೆಲ್ಲರೂ ಚುನಾವಣೆಯಲ್ಲಿ ಸೋತಿದ್ದರು. ದರ್ಶನ್ ಅಭಿಮಾನಿಗಳ ಬಳಗದ ಕುರಿತಂತೆ ಹೈಪ್ ಮಾಡಲಾಗುತ್ತಿದೆ. ಪೊಲೀಸ್ ಠಾಣೆಯ ಮುಂದೆ ಜನ ನಿಂತಿದ್ದಾರೆ ಎಂದ ಮಾತ್ರಕ್ಕೆ ಆತ ಅಷ್ಟು ಪ್ರಭಾವ ಹೊಂದಿದ್ದಾನೆ ಎಂದು ಹೇಳಲು ಆಗುವುದಿಲ್ಲ’ ಎಂದು ಹೇಳಿದರು.

‘ಇನ್ನೂ ದರ್ಶನ್‌ ಸುತ್ತಮುತ್ತ ಇರುವವರಲ್ಲಿ ಹೆಚ್ಚಿನವರು ನಟೋರಿಯಸ್‌ ರೌಡಿಗಳ ಗುಣಗಳನ್ನು ಹೊಂದಿದ್ದು, ಅದರಿಂದಲೇ ದರ್ಶನ್ ಗಮನ ಸೆಳೆಯುತ್ತಿದ್ದಾರೆ’ ಎಂದರು.



 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ