ಬೇಷರತ್ ಕ್ಷಮೆ ಯಾಚಿಸಿದ ಧ್ರು ವ ಸರ್ಜಾ

ಗುರುವಾರ, 25 ಫೆಬ್ರವರಿ 2021 (09:31 IST)
ಬೆಂಗಳೂರು: ಪೊಗರು ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಅವಮಾನ ಮಾಡಲಾಗಿದೆ ಎಂಬ ವಿಚಾರ ಸಾಕಷ್ಟು ವಿವಾದಕ್ಕೊಳಗಾಗಿತ್ತು. ಇದೀಗ ನಾಯಕ ಧ್ರುವ ಸರ್ಜಾ ಈ ಘಟನೆ ಬಗ್ಗೆ ಬೇಷರತ್ ಕ್ಷಮೆ ಯಾಚಿಸಿದ್ದಾರೆ.


ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಧ್ರುವ ಸರ್ಜಾ ‘ನಮ್ಮ ಇಡೀ ಕುಟುಂಬ ಹನುಮ ಭಕ್ತರು. ಆಂಜನೇಯನ ಆಶೀರ್ವಾದವೇ ನಮಗೆ ಶ್ರೀರಕ್ಷೆ. ನಮ್ಮ ಇಡೀ ವಂಶವೇ ಹಿಂದುತ್ವದ ಪದ್ಧತಿಯನ್ನು ಆಚರಿಸುತ್ತಾ ಗೌರವಿಸುತ್ತಾ ಬದುಕುತ್ತಿದ್ದೇವೆ.  ತಾತನ ಕಾಲದಿಂದಲೂ ಹಿಂದುತ್ವದ ಪ್ರತಿಪಾದಕರಾಗಿಯೇ ಬದುಕಿದ್ದೇವೆ, ಕೆಲಯೇ ಧರ್ಮ. ನಾವು ಎಲ್ಲಾ ಧರ್ಮಗಳನ್ನೂ ಗೌರವಿಸಿದ್ದೇವೆ. ಚಿತ್ರದ ಕತೆ, ಪಾತ್ರಪೋಷಣೆಯಲ್ಲಿ ಯಾವುದೇ ಸಮುದಾಯಕ್ಕೆ ನೋವಾಗಿದೆ ಎನ್ನುವಂತಹ ಮಾತು ನಿಜಕ್ಕೂ ನಮ್ಮ ತಂಡಕ್ಕೆ ಬೇಸರ ತಂದಿದೆ. ಇದಕ್ಕಾಗಿ ಬೇಷರತ್ ಕ್ಷಮೆ ಯಾಚಿಸುತ್ತೇನೆ. ನಿಮಗೆ ಬೇಸರವಾಗಿರೋ ದೃಶ್ಯಗಳನ್ನು ಕತ್ತರಿಸಿದ್ದೇವೆ. ಮತ್ತೆ ಸೆನ್ಸಾರ್ ಆದ ಮೇಲೆ ನಿಮ್ಮೆದುರು ಮಾತಾಡೋಣ ಎಂದು ನಿರ್ಧರಿಸಿದ್ದೆ. ಈಗ ಅದನ್ನು ಸರಿಪಡಿಸಲು ತಂತ್ರಜ್ಞರ ತಂಡ ಸಿದ್ದವಿದೆ. ನಮ್ಮ ಮನವಿಯನ್ನು ಪುರಸ್ಕರಿಸಿ, ಎಂದಿನಂತೆ ನಿಮ್ಮ ಆಶೀರ್ವಾದವಿರಲಿ’ ಎಂದು ಧ್ರುವ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ