ರೇಣುಕಾಸ್ವಾಮಿ ಕುಟುಂಬಕ್ಕೆ ಹಣ ಸಹಾಯ ಮಾಡಿದ ಧ್ರುವ ಸರ್ಜಾ ಫ್ಯಾನ್ಸ್‌

Sampriya

ಬುಧವಾರ, 26 ಜೂನ್ 2024 (16:49 IST)
Photo Courtesy X
ಬೆಂಗಳೂರು: ನಟ ದರ್ಶನ್ ಗ್ಯಾಂಗ್‌ನಿಂದ ಕೊಲೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ ಅಭಿಮಾನಿಗಳು ಧನ ಸಹಾಯ ಮಾಡಿದ್ದಾರೆ.

ಧ್ರವ ಸರ್ಜಾ ಅಭಿಮಾನಿ ಸಂಘದ ಅಧ್ಯಕ್ಷ ಮಹಾನ್ ಹಾಗೂ ತಂಡ ರೇಣುಕಾಸ್ವಾಮಿ ಪೋಷಕರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅದಲ್ಲದೆ ಅಭಿಮಾನಿಗಳಿಂದ ಸಂಗ್ರಹಿಸಿದ ಹಣವನ್ನು ಅವರಿಗೆ ನೀಡಿದರು.

ಮಾಹಿತಿ ಪ್ರಕಾರ, ಈ ವೇಳೆ ನಟ ಧ್ರುವ ಸರ್ಜಾ ಅವರು ರೇಣುಕಾಸ್ವಾಮಿ ಪೋಷಕರ ಜತೆ ಮಾತನಾಡಿ, ನಿಮ್ಮೊಂದಿಗೆ ನಾವಿದ್ದೇವೆ. ಯಾವುದೇ ಕಷ್ಟದ ಸಂದರ್ಭದಲ್ಲಿ ನಾವು ನಿಮ್ಮೊಂದಿಗೆ ಸದಾ ಇರುತ್ತೇವೆ ಎಂದು ಧೈರ್ಯ ತುಂಬಿದ್ದಾರೆ.

ದರ್ಶನ್ ಆಪ್ತೆ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಎಂಬ ಕೋಪದಲ್ಲಿ ದರ್ಶನ್ ಗ್ಯಾಂಗ್ ರೇಣುಕಾಸ್ವಾಮಿಯನ್ನು ಕಿಡ್ನಾಪ್ ಮಾಡಿ ಚಿತ್ರಹಿಂಸೆ ನೀಡಿ ಕೊಲೆ ಮಾಡಿತ್ತು. ಇನ್ನೂ ಚಿತ್ರರಂಗದ ದೊಡ್ಡ ಸ್ಟಾರ್ ನಟ ಈ ಕೊಲೆಯಲ್ಲಿ ಭಾಗಿಯಾಗಿರುವುದನ್ನು ಚಿತ್ರರಂಗ ಖಂಡಿಸಿತ್ತು. ಅದಲ್ಲದೆ ರೇಣುಕಾಸ್ವಾಮಿ ಕುಟುಂಬವನ್ನು ಕನ್ನಡ ಚಲನ ಚಿತ್ರಮಂಡಳಿ ಭೇಟಿ ಮಾಡಿ ಧನ ಸಹಾಯ ಮಾಡಿತ್ತು.



ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ