ನಿರ್ದೇಶಕ ನಾಗಶೇಖರ್ ಕಾರು ಅಪಘಾತ, ಮಹಿಳೆಗೆ ಗಾಯ

Sampriya

ಶುಕ್ರವಾರ, 6 ಸೆಪ್ಟಂಬರ್ 2024 (16:44 IST)
Photo Courtesy X
ಬೆಂಗಳೂರು: ನಿರ್ದೇಶಕ ನಾಗಶೇಖರ್ ಅವರು ಚಾಲನೆ ಮಾಡುತ್ತಿದ್ದ ಬೆಂಜ್ ಕಾರು ಮರಕ್ಕೆ ಗುದ್ದಿದ ಪರಿಣಾಮ ಓರ್ವ ಮಹಿಳೆ ಗಾಯಗೊಂಡಿದ್ದಾರೆ.

ಈ ಘಟನೆ ಜ್ಞಾನಭಾರತಿ ಕ್ಯಂಪಸ್‌ನಲ್ಲಿ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

ಇಂದು ಮಧ್ಯಾಹ್ನ 1:30ಕ್ಕೆ ನಿರ್ದೇಶಕ ನಾಗಶೇಖರ್‌ ಬೆಂಜ್ ಕಾರು ಡ್ರೈವ್ ಮಾಡಿಕೊಂಡು ಬರುವಾಗ ರಭಸವಾಗಿ ಬಂದು ಮರಕ್ಕೆ ಗುದ್ದಿದೆ. ಗಾಯಗೊಂಡ ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಾಗಶೇಖರ್ ಅವರು ಸೂಪರ್ ಹಿಟ್‌ ಸಿನಿಮಾಗಳನ್ನು ಕನ್ನಡ ನೀಡಿದ್ದು, ಸದ್ಯ ಇವರು ಸಂಜು ವೆಡ್ಸ್‌ ಗೀತಾ 2 ಚಿತ್ರಕ್ಕೆ ಆ್ಯಕ್ಷನ್ ಹೇಳಿದ್ದಾರೆ.  ಮೈನಾ, ಸಂಜು ವೆಡ್ಸ್ ಗೀತಾ, ಅಮರ್ ಸೇರಿದಂತೆ ಹಲವು ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ