ಸಾಹಸಸಿಂಹ ವಿಷ್ಣುವರ್ಧನ್ ಗೆ ಮರಣೋತ್ತರವಾಗಿ ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ ಗೌರವ

ಮಂಗಳವಾರ, 7 ನವೆಂಬರ್ 2023 (20:30 IST)
WD
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅವರಿಗೆ ಮರಣೋತ್ತರವಾಗಿ ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ ಪ್ರಶಸ್ತಿಯ ಗೌರವ ಲಭಿಸಿದೆ.

ಡಾ. ವಿಷ್ಣುವರ್ಧನ್ ಅಲ್ಲದೆ, ನಟ ರವಿಚಂದ್ರನ್, ಸಾಮಾಜಿಕ ಕ್ಷೇತ್ರದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಕರ್ನಾಟಕದ ಗಣ್ಯರಿಗೆ ರಾಜ್ಯಪಾಲ ಥ್ಯಾವರ್ ಚಂದ್ ಗೆಹ್ಲೋಟ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.

ವಿಷ್ಣು ದಾದ ಪರವಾಗಿ ಅವರ ಅಳಿಯ, ನಟ ಅನಿರುದ್ಧ್ ಜತ್ಕಾರ್ ಪ್ರಶಸ್ತಿ ಸ್ವೀಕರಿಸಿದರು. ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರಿಗೆ ಪ್ರಶಸ್ತಿ ಪ್ರಧಾನ ಮಾಡಲಾಯಿತು. ರಾಷ್ಟ್ರಮಟ್ಟದಲ್ಲಿ ನೀಡುವ ಚಾಂಪಿಯನ್ಸ್ ಆಫ್ ಚೇಂಜ್ ಪ್ರಶಸ್ತಿಯಂತೇ ರಾಜ್ಯದ ಸಾಧಕರಿಗೆ ಚಾಂಪಿಯನ್ಸ್ ಆಫ್ ಚೇಂಜ್ ಕರ್ನಾಟಕ ಪ್ರಶಸ್ತಿಯನ್ನು ನೀಡಲಾಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ