ನಿರ್ದೇಶಕರಲ್ಲ, ದುಬಾರಿ ಸಿನಿಮಾವೇ ಸದ್ಯಕ್ಕಿಲ್ಲ!: ನಿರ್ಮಾಪಕರ ಸ್ಪಷ್ಟನೆ

ಶನಿವಾರ, 12 ಜೂನ್ 2021 (10:46 IST)
ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅಭಿನಯಸಬೇಕಿದ್ದ ‘ದುಬಾರಿ’ ಸಿನಿಮಾದಿಂದ ನಿರ್ದೇಶಕ ನಂದಕಿಶೋರ್ ಹೊರಬಂದಿದ್ದಾರೆ ಎಂಬ ಸುದ್ದಿ ನಿನ್ನೆ ಓಡಾಡಿತ್ತು. ಈ ಬಗ್ಗೆ ಈಗ ನಿರ್ಮಾಪಕ ಉದಯ್ ಕೆ ಮೆಹ್ತಾ ಸ್ಪಷ್ಟನೆ ನೀಡಿದ್ದಾರೆ.


ಪೊಗರು ಜೋಡಿ ಧ್ರುವ-ನಂದಕಿಶೋರ್ ಕಾಂಬಿನೇಷನ್ ನ ಸಿನಿಮಾದಲ್ಲಿ ನಾಯಕಿಯಾಗಿ ಶ್ರೀಲೀಲಾ ಅಭಿನಯಿಸಲಿದ್ದಾರೆ ಎಂಬುದೆಲ್ಲಾ ಪಕ್ಕಾ ಆಗಿತ್ತು. ಆದರೆ ಇದೀಗ ನಿರ್ದೇಶಕ ನಂದಕಿಶೋರ್ ಸಿನಿಮಾದಿಂದ ಹೊರನಡೆದಿದ್ದಾರೆ ಎನ್ನಲಾಗಿತ್ತು.

ಇದರ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಉದಯ್ ಕೆ ಮೆಹ್ತಾ ‘ಈ ಸಿನಿಮಾದಿಂದ ನಿರ್ದೇಶಕ ನಂದಕಿಶೋರ್ ರನ್ನು ಹೊರಹಾಕಲಾಗಿದೆ ಎನ್ನುವ ಸುದ್ದಿಗಳೆಲ್ಲಾ ಆಧಾರ ರಹಿತ.ದುಬಾರಿಯನ್ನು ನಂದಕಿಶೋರ್ ಅವರೇ ನಿರ್ದೇಶಿಸಲಿದ್ದಾರೆ. ಸಿನಿಮಾದ ಹೆಚ್ಚಿನ ಭಾಗ ವಿದೇಶದಲ್ಲಿ ಚಿತ್ರೀಕರಣವಾಗಬೇಕಿತ್ತು. ಆದರೆ ಸದ್ಯದ ಪರಿಸ್ಥಿತಿಯಲ್ಲಿ ಇದು ಅಸಾಧ್ಯ. ಹೀಗಾಗಿ ಸಿನಿಮಾವನ್ನೇ ಕೆಲವು ದಿನಗಳ ಮಟ್ಟಿಗೆ ಮುಂದೂಡಿದ್ದೇವೆ’ ಎಂದು ನಿರ್ಮಾಪಕರು ಸ್ಪಷ್ಟನೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ