ಗೆದ್ದ ದುನಿಯಾ ವಿಜಯ್ ಸಲಗ: ಚಿತ್ರತಂಡದಿಂದ ವಿಜಯ ಯಾತ್ರೆ

ಗುರುವಾರ, 21 ಅಕ್ಟೋಬರ್ 2021 (09:35 IST)
ಬೆಂಗಳೂರು: ಮೊದಲ ಬಾರಿಗೆ ನಿರ್ದೇಶನ ಮಾಡಿ ನಟಿಸಿದ ಸಲಗ ಸಿನಿಮಾ ಗೆದ್ದ ಖುಷಿಯಲ್ಲಿರುವ ದುನಿಯಾ ವಿಜಯ್ ಮತ್ತು ಚಿತ್ರತಂಡ ಈಗ ಪ್ರೇಕ್ಷಕರಿಗೆ ಧನ್ಯವಾದ ಹೇಳಲು ನಿರ್ಧರಿಸಿದ್ದಾರೆ.


ಇದಕ್ಕಾಗಿ ಕರ್ನಾಟಕದಾದ್ಯಂತ ಚಿತ್ರತಂಡ ವಿಜಯ ಯಾತ್ರೆ ಮಾಡಿ, ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಲು ಮುಂದಾಗಿದೆ. ನಿರ್ಮಾಪಕ ಕೆ.ಪಿ. ಶ್ರೀಕಾಂತ್ ನೇತೃತ್ವದಲ್ಲಿ ಈ ವಿಜಯ ಯಾತ್ರೆಗೆ ಪ್ಲ್ಯಾನ್ ಮಾಡಲಾಗಿದೆ.

ವಿಜಯ ಯಾತ್ರೆಯಲ್ಲಿ ದುನಿಯಾ ವಿಜಯ್, ಡಾಲಿ ಧನಂಜಯ್ ಸೇರಿದಂತೆ ಚಿತ್ರದ ಪ್ರಮುಖ ಪಾತ್ರಧಾರಿಗಳು ಪಾಲ್ಗೊಳ್ಳಲಿದ್ದಾರೆ. ಈ ಬಗ್ಗೆ ಸದ್ಯದಲ್ಲೇ ಘೋಷಣೆ ಹೊರಬೀಳಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ