ದುನಿಯಾ ವಿಜಯ್ ರಂಪಾಟ: ರಾತ್ರಿಯಿಡೀ ಪರಪ್ಪನ ಅಗ್ರಹಾರ ವಾಸ, ಇಂದು ಮತ್ತಷ್ಟು ಕಾದಿದೆ ಕಂಟಕ!

ಸೋಮವಾರ, 24 ಸೆಪ್ಟಂಬರ್ 2018 (08:57 IST)
ಬೆಂಗಳೂರು: ಬಾಡಿ ಬಿಲ್ಡರ್ ಮಾರುತಿ ಗೌಡ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ನಟ ದುನಿಯಾ ವಿಜಯ್ ನಿನ್ನೆ ರಾತ್ರಿಯಿಡೀ ತಮ್ಮ ಸಹಚರರೊಂದಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಳೆದರು.
 

ಇಂದು ವಿಜಯ್ ರನ್ನು ಖೈದಿಗಳ ಕೊಠಡಿಗೆ ಸ್ಥಳಾಂತರಿಸುವ ಸಾಧ್ಯತೆಯಿದೆ. ದುನಿಯಾ ವಿಜಯ್ ಮೇಲೆ ಕಿಡ್ನ್ಯಾಪ್ ಮತ್ತು ಹಲ್ಲೆ ಪ್ರಕರಣ ದಾಖಲಾಗಿದೆ.

ಇಂದು ಹಲ್ಲೆಗೊಳಗಾದ ಮಾರುತಿ ಗೌಡ ಚಿಕ್ಕಪ್ಪ ಪಾನಿಪುರಿ ಕಿಟ್ಟಿ ಗೃಹ ಸಚಿವರೂ ಆಗಿರುವ ಡಿಸಿಎಂ ಪರಮೇಶ್ವರ್ ರನ್ನು ಭೇಟಿಯಾಗಿ ವಿಜಯ್ ವಿರುದ್ಧ ತಕ್ಕ ಕ್ರಮ ಕೈಗೊಳ್ಳಲು ಮನವಿ ಮಾಡಲಿದ್ದಾರೆ. ಇನ್ನೊಂದೆಡೆ ಇಂದು ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಈ ಸಂಬಂಧ ಸಭೆ ನಡೆಯಲಿದ್ದು, ವಿಜಿ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಯಲಿದೆ. ಆ ಮೂಲಕ ಕರಿಚಿರತೆಗೆ ಮತ್ತಷ್ಟು ಸಂಕಷ್ಟ ಕಾದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ