ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳಕ್ಕೆ ಇಂದು ಬರಲಿರುವ ಕುಟುಂಬಸ್ಥರು

ಮಂಗಳವಾರ, 2 ನವೆಂಬರ್ 2021 (07:44 IST)
ಬೆಂಗಳೂರು: ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಮಾಧಿ ಸ್ಥಳಕ್ಕೆ ಇಂದು ಕುಟುಂಬಸ್ಥರು ಭೇಟಿ ಕೊಡಲಿದ್ದಾರೆ.

ಪುನೀತ್ ಸಮಾಧಿಗೆ ಹಾಲು ತುಪ್ಪ ಬಿಡುವ ಕಾರ್ಯಕ್ರಮ ಇಂದು ನೆರವೇರಲಿದೆ. ಈ ಕಾರಣಕ್ಕೆ ಪತ್ನಿ ಅಶ್ವಿನಿ, ಪುತ್ರಿಯರು, ಶಿವರಾಜ್ ಕುಮಾರ್ ಸೇರಿದಂತೆ ಕುಟುಂಬಸ್ಥರು ಭಾಗಿಯಾಗಲಿದ್ದಾರೆ.

ಇಂದಿನವರೆಗೆ ಕಂಠೀರವ ಸ್ಟುಡಿಯೋಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಹಾಗಿದ್ದರೂ ಹೊರಗಿನಿಂದಲೇ ಪೂಜೆ ಮಾಡುತ್ತಿದ್ದಾರೆ. ಕುಟುಂಬಸ್ಥರ ಪೂಜೆ ಬಳಿಕ ಸಮಾಧಿ ಸ್ಥಳಕ್ಕೆ ಸಾರ್ವಜನಿಕರಿಗೆ ಪ್ರವೇಶ ಸಿಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ