ಇಂದು ಸಂಜೆ ಅಂತ್ಯ ಸಂಸ್ಕಾರ!

ಶನಿವಾರ, 30 ಅಕ್ಟೋಬರ್ 2021 (11:35 IST)
ಪುನೀತ್ ರಾಜ್ ಕುಮಾರ್ ದಿವಂಗತರಾದ ಮೇಲೆ ಅವರ ಅಭಿಮಾನಿಗಳು ನಿರಂತರವಾಗಿ ಬರುತ್ತಿದ್ದಾರೆ. ಭದ್ರತಾ ವ್ಯವಸ್ಥೆ ಒದಗಿಸಿದ್ದೇವೆ.
ಜನರು ಇದೇ ರೀತಿ ಸಹಕಾರ ಕೊಡಲಿ ಎಂದು ಭಾವಿಸಿದ್ದೇನೆ. ಇಂದು ಕುಟುಂಬದವರ ತೀರ್ಮಾನದಂತೆ ಮುಂದಿನ ವ್ಯವಸ್ಥೆ ಮಾಡುತ್ತೇವೆ. ಅಂತ್ಯಸಂಸ್ಕಾರಕ್ಕೆ ಆಗಬೇಕಾದ ವ್ಯವಸ್ಥೆ ಮಾಡುತ್ತೇವೆ. ಅಂತ್ಯಸಂಸ್ಕಾರ ಸಂಜೆ ನಡೆಯುವ ಸಾಧ್ಯತೆ ಇದೆ. ಸೂಕ್ತವಾದ ಭದ್ರತೆ ಸಿದ್ಧತೆ ಇದೆ. ಪಾರ್ಥೀವ ಶರೀರ ಕಂಠೀರವ ಸ್ಟೇಡಿಯಂನಿಂದ ಸ್ಟುಡಿಯೋದವರೆಗೆ ಹೋಗುವ ಸಂದರ್ಭದಲ್ಲಿ ರಸ್ತೆ ಬದಲಾವಣೆ ಮಾಡಲಾಗುತ್ತದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಹೇಳಿಕೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ