ಶಿವರಾಜ್ ಕುಮಾರ್ ಭೈರತಿ ರಣಗಲ್ ರಿಲೀಸ್ ಮುಂದೆ ಹಾಕಲು ಕಾರಣ ಹೇಳಿದ ಗೀತಕ್ಕ

Krishnaveni K

ಮಂಗಳವಾರ, 27 ಆಗಸ್ಟ್ 2024 (09:35 IST)
ಬೆಂಗಳೂರು: ಶಿವರಾಜ್ ಕುಮಾರ್ ನಾಯಕರಾಗಿರುವ ಭೈರತಿ ರಣಗಲ್ ಸಿನಿಮಾ ರಿಲೀಸ್ ಮುಂದೂಡಿಕೆಯಾಗಿದೆ. ಇದಕ್ಕೆ ಕಾರಣವೇನೆಂದೂ ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ ವಿವರಿಸಿದ್ದಾರೆ.

ಎಲ್ಲಾ ಅಂದುಕೊಂಡಂತೇ ನಡೆದಿದ್ದರೆ ಇದೇ ತಿಂಗಳು ಭೈರತಿ ರಣಗಲ್ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಈಗ ಕೊನೆ ಕ್ಷಣದಲ್ಲಿ ಸಿನಿಮಾ ರಿಲೀಸ್ ಮುಂದೆ ಹಾಕಲಾಗಿದೆ. ಸಿನಿಮಾ ಕೂಡಾ ಕಂಪ್ಲೀಟ್ ಆಗಿದೆ. ಆದರೆ ದಿಡೀರ್ ಆಗಿ ಸಿನಿಮಾ ರಿಲೀಸ್ ಮುಂದೂಡಲಾಗಿದೆ.

ಗೀತಾ ಪಿಕ್ಚರ್ಸ್ ನಿರ್ಮಾಣ ಮಾಡುತ್ತಿರುವ ಭೈರತಿ ರಣಗಲ್ ಎಂಬ ಮಾಸ್ ಸಿನಿಮಾ ನವಂಬರ್ 15 ಕ್ಕೆ ಬಿಡುಗಡೆಯಾಗಲಿದೆ ಎಂದು ಘೋಷಣೆ ಮಾಡಲಾಗಿದೆ. ಸಿನಿಮಾ ರಿಲೀಸ್ ಮುಂದೂಡಿಕೆ ಮಾಡಲು ಕಾರಣವೇನೆಂದು ಗೀತಾ ಶಿವರಾಜ್ ಕುಮಾರ್ ವಿವರಿಸಿದ್ದಾರೆ. ಆಗಸ್ಟ್-ಸೆಪ್ಟೆಂಬರ್ ಅವಧಿಯಲ್ಲಿ ಬೇರೆ ಸಿನಿಮಾಗಳು ಬಿಡುಗಡೆಯಾಗುತ್ತಿವೆ. ನಮ್ಮ ಕನ್ನಡ ಸಿನಿಮಾಗಳೇ ರಿಲೀಸ್ ಆಗುತ್ತಿವೆ. ಅವರಿಗೆ ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ ನಮ್ಮ ಸಿನಿಮಾ ರಿಲೀಸ್ ಮುಂದೂಡುತ್ತಿದ್ದೇವೆ ಎಂದಿದ್ದಾರೆ.

ಭೈರತಿ ರಣಗಲ್ ಸಿನಿಮಾ ಈ ಹಿಂದೆ ಶಿವಣ್ಣ ನಾಯಕರಾಗಿ ಬಿಡುಗಡೆಯಾಗಿದ್ದ ಮುಫ್ತಿ ಸಿನಿಮಾದ ಮುಂದುವರಿದ ಭಾಗ. ಮುಫ್ತಿ ಬಾಕ್ಸ್ ಆಫೀಸ್ ನಲ್ಲಿ ಹಿಟ್ ಆಗಿತ್ತು. ಇದೀಗ ಭೈರತಿ ರಣಗಲ್ ಸಿನಿಮಾದ ಮೇಲೂ ಪ್ರೇಕ್ಷಕರು ಅಪಾರ ನಿರೀಕ್ಷೆಯಿಟ್ಟುಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ