ರೆಬಲ್ ಸ್ಟಾರ್ ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಸರಕಾರ ಗ್ರೀನ್ ಸಿಗ್ನಲ್

ಸೋಮವಾರ, 29 ಜೂನ್ 2020 (16:12 IST)
ಹಿರಿಯ ಚಿತ್ರನಟ, ಕೇಂದ್ರ ಮಾಜಿ ಸಚಿವ ರೆಬಲ್ ಸ್ಟಾರ್ ದಿವಂಗತ ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ ಸಿಎಂ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಬೆಂಗಳೂರಿನ ಕಂಠೀರವ ಸ್ಟುಡಿಯೋ ಆವರಣದಲ್ಲಿ 1 ಎಕರೆ 34 ಗುಂಟೆ ಗುರುತಿಸಲಾದ ಸ್ಥಳದಲ್ಲಿ ಅಂಬರೀಶ್ ಅವರ ಸ್ಮಾರಕ ನಿರ್ಮಾಣವಾಗಲಿದ್ದು, ಇದಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಸಹಮತ ವ್ಯಕ್ತಪಡಿಸಿದ್ದು, ಸರಕಾರದಿಂದ 5 ಕೋಟಿ ರೂ. ಕೊಡುವುದಾಗಿ ತಿಳಿಸಿದ್ದಾರೆ.

ರೆಬಲ್ ಸ್ಟಾರ್ ಅಂಬರೀಶ್ ಸ್ಮಾರಕ ಪ್ರತಿಷ್ಠಾನದ ಕುರಿತು ನಡೆದ ಸಭೆಯಲ್ಲಿ ಸಂಸದೆ ಸುಮಲತಾ ಹಾಗೂ ಚಿತ್ರರಂಗದ ಪ್ರಮುಖರು ಪಾಲ್ಗೊಂಡಿದ್ದರು.


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ