ಭಾರತ ಅಂತಾರಾಷ್ಟ್ರೀಯ ಶ್ರವಣದೋಷ ಚಲನಚಿತ್ರೋತ್ಸವ

ಬುಧವಾರ, 28 ಡಿಸೆಂಬರ್ 2016 (11:02 IST)
ನಾಲ್ಕನೇ ಭಾರತ ಅಂತಾರಾಷ್ಟ್ರೀಯ ಶ್ರವಣದೋಷ ಚಲನಚಿತ್ರೋತ್ಸವ 2016 ಡಿಸೆಂಬರ್ 28 ರಿಂದ 30 ರವರೆಗೆ ಮೂರು ದಿನಗಳ ಕಾಲ ಜೈನ್ ವಿಶ್ವವಿದ್ಯಾಲಯ, ಜಯನಗರ, ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.
 
ಡಿಸೆಂಬರ್ 28 ರಂದು ಮಧ್ಯಾಹ್ನ 2-30 ಕ್ಕೆ ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಮಂತ್ರಾಲಯದ ಚಲನಚಿತ್ರ ವಿಭಾಗದ ನಿರ್ದೇಶಕ ಸಿ. ಸೆಂಥಿಲ್ ರಾಜನ್ ಅವರು ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಜೈನ್ ವಿಶ್ವವಿದ್ಯಾಲಯದ ಅಧ್ಯಕ್ಷ ಡಾ.ಚೆನ್ನರಾಜ್ ರಾಯಚಂದ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನಿರ್ದೇಶಕ ಎನ್.ಆರ್. ವಿಶುಕುಮಾರ್ ಅವರು ಭಾಗವಹಿಸುವರು.
 
ಡಿಸೆಂಬರ್ 30 ರಂದು ಮಧ್ಯಾಹ್ನ 2-30 ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಪಾಲ್ಗೊಳ್ಳಲಿದ್ದಾರೆ. ಈ ಮೂರು ದಿನಗಳ ಕಾಲ ಚಲನಚಿತ್ರಗಳ ಪ್ರದರ್ಶನ, ವಿಚಾರ ಸಂಕಿರಣ ಹಾಗೂ ಸಿನಿಮಾಗೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ