ನಾಲ್ಕನೇ ಭಾರತ ಅಂತಾರಾಷ್ಟ್ರೀಯ ಶ್ರವಣದೋಷ ಚಲನಚಿತ್ರೋತ್ಸವ 2016 ಡಿಸೆಂಬರ್ 28 ರಿಂದ 30 ರವರೆಗೆ ಮೂರು ದಿನಗಳ ಕಾಲ ಜೈನ್ ವಿಶ್ವವಿದ್ಯಾಲಯ, ಜಯನಗರ, ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಡಿಸೆಂಬರ್ 30 ರಂದು ಮಧ್ಯಾಹ್ನ 2-30 ಕ್ಕೆ ಸಮಾರೋಪ ಸಮಾರಂಭ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಪಾಲ್ಗೊಳ್ಳಲಿದ್ದಾರೆ. ಈ ಮೂರು ದಿನಗಳ ಕಾಲ ಚಲನಚಿತ್ರಗಳ ಪ್ರದರ್ಶನ, ವಿಚಾರ ಸಂಕಿರಣ ಹಾಗೂ ಸಿನಿಮಾಗೆ ಸಂಬಂಧಿಸಿದ ಕಾರ್ಯಕ್ರಮಗಳು ನಡೆಯಲಿವೆ ಎಂದು ಪ್ರಕಟಣೆ ತಿಳಿಸಿದೆ.