ದೀಪಕ್ ರಾವ್ ಹಾಗು ಬಶೀರ್ ಅವರ ನಿವಾಸಕ್ಕೆ ಭೇಟಿ ನೀಡಿದ ಇಂದ್ರಜಿತ್ ಲಂಕೇಶ್

ಬುಧವಾರ, 10 ಜನವರಿ 2018 (06:49 IST)
ಮಂಗಳೂರು : ದುಷ್ಕರ್ಮಿಗಳಿಂದ ಹತ್ಯೆಗಿಡಾದ ಮಂಗಳೂರಿನ ಕಾಟಿಪಳ್ಳದ ದೀಪಕ್ ರಾವ್ ಹಾಗು ಬಶೀರ್ ಅವರ ನಿವಾಸಕ್ಕೆ ನಿರ್ದೇಶಕರಾದ ಇಂದ್ರಜಿತ್ ಲಂಕೇಶ್ ಅವರು ಭೇಟಿ ನೀಡಿ ಮನೆಯರಿಗೆ ಸಾಂತ್ವಾನ ಹೇಳಿದ್ದಾರೆ.

 
ಮೊದಲಿಗೆ ದೀಪಕ್ ರಾವ್ ಅವರ ಮನೆಗೆ ಭೇಟಿ ನೀಡಿ ಅವರ ತಾಯಿ ಪ್ರೇಮ ಹಾಗು ಸಹೋದರ ಸತೀಶ್ ಅವರಿಗೆ ಸಾಂತ್ವಾನ ಹೇಳಿ, 25 ಸಾವಿರ ಸಹಾಯ ಧನ ನೀಡಿದ್ದಾರೆ. ನಂತರ ಬಶೀರ್ ಅವರ ಮನೆಗೆ ಭೇಟಿ ನೀಡಿ ಅವರ ಪುತ್ರರು ಹಾಗು ಕುಟುಂಬದವರಿಗೆ ಸಾಂತ್ವಾನ ಹೇಳಿ ಅವರಿಗೂ ಕೂಡ 25 ಸಾವಿರ ಸಹಾಯಧನ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ