ದರ್ಶನ್ ಬಿಡುಗಡೆ ಬಗ್ಗೆ ಭವಿಷ್ಯ ನುಡಿದ ಬೀರಲಿಂಗೇಶ್ವರ ದೈವ

Sampriya

ಗುರುವಾರ, 5 ಸೆಪ್ಟಂಬರ್ 2024 (14:51 IST)
ಬಳ್ಳಾರಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಆರೋಪಿಗಳ ದೋಷಾರೋಪ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಕೆಯಾಗುತ್ತಿದ್ದ ಹಾಗೇ ಎ2ಆರೋಪಿ ನಟ ದರ್ಶನ್ ಅವರು ಚಿಂತೆಗೆ ಒಳಗಾಗಿದ್ದಾರೆಂಬ ಮಾಹಿತಿಯಿದೆ. ಇತ್ತ ಅವರ ಅಭಿಮಾನಿಗಳು ಹೇಗಾದರೂ ದರ್ಶನ್ ಅವರು ಈ ಪ್ರಕರಣದಿಂದ ಮುಕ್ತರಾಗಿ ಹೊರಬರಲಿ ಎಂದು ಹಾರೈಸಿ, ದೇವರ ಮೊರೆ ಹೋಗುತ್ತಿದ್ದಾರೆ.

ದರ್ಶನ್‌ ಬಿಡುಗಡೆಗಾಗಿ ಅವರ ಅಭಿಮಾನಿಗಳು  ಫೋಟೋ ಹಿಡಿದು ದೈವದ ಮೊರೆ ಹೋಗಿರುವ ಸನ್ನಿವೇಶ ಬಳ್ಳಾರಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಬಳ್ಳಾರಿಯ ಬಲಕಲ್ ಅನ್ನೋ ಗ್ರಾಮದ ಬೀರಲಿಂಗೇಶ್ವರ ದೈವದ ಬಳಿ ದರ್ಶನ್ ಬಿಡುಗಡೆ ಅಭಿಮಾನಿಗಳು ದಿನಾಂಕ ಕೇಳಿದ್ದಾರೆ. ಈ ವೇಳೆ ಮೂರು ತಿಂಗಳ ಬಳಿಕ ದರ್ಶನ್ ಹೊರ ಬರ್ತಾರೆ ಅಂತಾ ಬೀರಲಿಂಗೇಶ್ವರ ದೈವ ಭವಿಷ್ಯ ನುಡಿದಿದೆ ಎಂಬ ಮಾಹಿತಿಯಿದೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋದಲ್ಲಿ ದರ್ಶನ್ ಭಾವಚಿತ್ರದ ಮೇಲೆ ತಲೆಯಿಟ್ಟು ದೈವ ಭವಿಷ್ಯ ನುಡಿದಿದೆ. ಈ ವಿಡಿಯೋವನ್ನು ದರ್ಶನ್ ಫ್ಯಾನ್ಸ್ ಹಂಚಿಕೊಂಡು, ನಮ್ಮ ನೆಚ್ಚಿನ ನಟನ ಬರುವಿಕೆಗಾಗಿ ಕಾಯುತ್ತಿದ್ದಾರೆ.

ಇನ್ನೂ ಜಾರ್ಜ್‌ಶೀಟ್ ಸಲ್ಲಿಕೆಯಾಗುತ್ತಿದ್ದ ಹಾಗೇ ನಟ ದರ್ಶನ್ ಅವರು ಈ ಬಗ್ಗೆ ಮಾಹಿತಿ ಪಡೆಯಲು ಕುತೂಹಲದಿಂದ ಇದ್ದಾರೆ. ಜೈಲಾಧಿಕಾರಿಗಳ ಬಳಿ ಟಿವಿ ಹಾಕಿಸಿಕೊಡುವಂತೆ ದರ್ಶನ್ ಕೇಳಿಕೊಂಡಿದ್ದಾರೆ. ಇಂದು ವಿಜಯಲಕ್ಷ್ಮೀ ದರ್ಶನ್ ಅವರು ಪತಿಯನ್ನು ಭೇಟಿಯಾಗಲು ಬಳ್ಳಾರಿ ಜೈಲಿಗೆ ಬರಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ