ಪುತ್ರ, ಸಹೋದರನಿಗಾಗಿ ನಿರ್ದೇಶನ ಮಾಡಲಿದ್ದಾರೆ ನವರಸನಾಯಕ ಜಗ್ಗೇಶ್

ಶುಕ್ರವಾರ, 6 ಡಿಸೆಂಬರ್ 2019 (09:51 IST)
ಬೆಂಗಳೂರು: ಕಾಳಿದಾಸ ಕನ್ನಡ ಮೇಷ್ಟ್ರು ಸಿನಿಮಾ ಸಕ್ಸಸ್ ಆಗಿರುವ ಖುಷಿಯಲ್ಲಿರುವ ನವರಸನಾಯಕ ಜಗ್ಗೇಶ್ ಈಗ ಹೊಸ ಸಿನಿಮಾ ಮಾಡುತ್ತಿರುವ ಸುದ್ದಿ ಬಂದಿದೆ. ಆದರೆ ಈ ಬಾರಿ ಅವರು ನಿರ್ದೇಶನ ಮಾಡುತ್ತಿದ್ದಾರೆ.


ಹಿಂದೆ ಎರಡು ಸಿನಿಮಾಗಳನ್ನು ನಿರ್ದೇಶಿಸಿದ್ದ ಜಗ್ಗೇಶ್ ಗೆ ಇದು ನಿರ್ದೇಶಕರಾಗಿ ಮೂರನೇ ಸಿನಿಮಾ. ವಿಶೇಷವೆಂದರೆ ಈ ಸಿನಿಮಾದಲ್ಲಿ ಅವರು ಪುತ್ರ ಗುರುರಾಜ್ ಮತ್ತು ಸಹೋದರ ಕೋಮಲ್ ಗಾಗಿ ನಿರ್ದೇಶನ ಮಾಡುತ್ತಿದ್ದಾರೆ.

ಫೆಬ್ರವರಿಯಲ್ಲಿ ಸಿನಿಮಾ ಶೂಟಿಂಗ್ ಆರಂಭಿಸಲಿದ್ದಾರೆ. ಸದ್ಯಕ್ಕೆ ವಿಜಯ್ ಪ್ರಸಾದ್ ನಿರ್ದೇಶನದ ತೋತಾಪುರಿ ಸಿನಿಮಾದಲ್ಲಿ ಅಭಿನಯಿಸುತ್ತಿರುವ ಜಗ್ಗೇಶ್ ಇದಾದ ಬಳಿಕ ತಮ್ಮ ನಿರ್ದೇಶನದ ಸಿನಿಮಾ ಕೈಗೆತ್ತಿಕೊಳ್ಳಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ