ನಾಳೆ ರಿಲೀಸ್ ಆಗಲಿದೆ ‘ಜೀವ್ನಾನೇ ನಾಟ್ಕ ಸಾಮಿ’ ಸಿನಿಮಾ

ಬುಧವಾರ, 18 ಆಗಸ್ಟ್ 2021 (09:01 IST)
ಬೆಂಗಳೂರು: ಕನ್ನಡತಿ ಧಾರವಾಹಿ ಖ್ಯಾತಿಯ ನಟ ಕಿರಣ್ ರಾಜ್, ಸರಿಗಮಪ ರಿಯಾಲಿಟಿ ಶೋ ಖ್ಯಾತಿಯ ಶ್ರೀಹರ್ಷ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಜೀವ್ನಾನೇ ನಾಟ್ಕ ಸಾಮಿ’ ಎನ್ನುವ ಹೊಸಬರ ಸಿನಿಮಾ ನಾಳೆ ತೆರೆಗೆ ಬರಲು ಸಿದ್ಧವಾಗಿದೆ.


ಲಾಕ್ ಡೌನ್ ಬಳಿಕ ಪ್ರೇಕ್ಷಕರೆದುರು ಬರುತ್ತಿರುವ ಮೊದಲ ಸಿನಿಮಾವಿದು. ರಂಗಭೂಮಿ ಹಿನ್ನಲೆಯಿಂದ ಬಂದ ರಾಜು ಭಂಡಾರಿ ರಾಜಾವರ್ತ ಮೊದಲ ಬಾರಿಗೆ ನಿರ್ದೇಶಿಸಿರುವ ಭರಪೂರ ಮನರಂಜನೆಯ ಚಿತ್ರವಿದು.

ಈಗಾಗಲೇ ಅಂತಾರಾಷ್ಟ್ರೀಯ ಮಟ್ಟದ ಚಲನಚಿತ್ರೋತ್ಸವಗಳಲ್ಲಿ ಸ್ಪರ್ಧಿಸಿ ಪ್ರಶಸ್ತಿ ಪಡೆದುಕೊಂಡಿರುವ ಹೊಸಬರ ಈ ಸಿನಿಮಾಕ್ಕೆ ನಿಮ್ಮ ಪ್ರೋತ್ಸಾಹವಿರಲಿ ಎಂದು ಚಿತ್ರತಂಡ ಕೇಳಿಕೊಂಡಿದೆ.

ಕಳೆದ ಬಾರಿ ಲಾಕ್ ಡೌನ್ ಮುಗಿದ ಮೇಲೆ ಹೊಸಬರ ಸಿನಿಮಾಗಳೇ ಸುದ್ದಿ ಮಾಡಿದ್ದವು. ಈ ಬಾರಿಯೂ ಅದೇ ನಿರೀಕ್ಷೆಯಲ್ಲಿ ಚಿತ್ರರಂಗವಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ