ಆಗಸ್ಟ್ 19ಕ್ಕೆ ತೆರೆಮೇಲೆ ಬರಲಿದೆ ರಿಯಾಲಿಟಿ ಶೋ ಕಥಾವಸ್ತು

ಭಾನುವಾರ, 1 ಆಗಸ್ಟ್ 2021 (18:45 IST)
ಆಗಸ್ಟ್ 19ಕ್ಕೆ ತೆರೆಮೇಲೆ ಬರಲಿದೆ ರಿಯಾಲಿಟಿ ಶೋ ಕಥಾವಸ್ತು ಹೊಂದಿರುವ ‘ಜೀವ್ನಾನೇ ನಾಟ್ಕ ಸಾಮಿ’
ಮಹಾಭಾರತದ ಉಪಕಥೆಯನ್ನ ಆಧಾರವಾಗಿಟ್ಟುಕೊಂಡು ನಿರ್ಮಾಣವಾಗಿರುವ `ಜೀವ್ನಾನೇ ನಾಟ್ಕ ಸಾಮಿ’ ಚಿತ್ರದಲ್ಲಿ `ಕನ್ನಡತಿ’ ಧಾರಾವಾಹಿ ಖ್ಯಾತಿಯ ಕಿರಣ್ ರಾಜ್ ಹಾಗೂ ‘ಸರಿಗಮಪ’ ಮೂಲಕ ಮನೆಮಾತಾಗಿದ್ದ ಶ್ರೀಹರ್ಷ ಅಭಿನಯಿಸಿದ್ದಾರೆ. 
ರಂಗಭೂಮಿ ಹಿನ್ನೆಲೆ ಹೊಂದಿರುವ ರಾಜು ಭಂಡಾರಿ ರಾಜವರ್ತ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದು, ಮಹಾಭಾರತದ ಉಪಕಥೆಯನ್ನು ಆಧರಿಸಿ ಹಾಗೂ ರಿಯಾಲಿಟಿ ಶೋಗಳಲ್ಲಿ ನಡೆಯುವ ಕೆಲವು ವಿಷಯಗಳ ಬಗ್ಗೆ ಕಥಾವಸ್ತು ಇಟ್ಟುಕೊಂಡು ಈ ಚಿತ್ರ ಮೂಡಿ ಬರುತ್ತಿದೆ.
ಪಾಸಿಟಿವ್ ಹಾಗೂ ನೆಗಟಿವ್ ಆಲೋಚನೆಗಳನ್ನು ಎರಡು ಪಾತ್ರಗಳ ಮೂಲಕ ಹೇಳ ಹೊರಟಿದ್ದೇವೆ. ಕಿರಣ್ ರಾಜ್ ಹಾಗೂ ಶ್ರೀಹರ್ಷ ಈ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇದೊಂದು ಸಂಪೂರ್ಣ ಮನರಂಜನಾ ಚಿತ್ರ. ಸ್ವಲ್ಪ ಟ್ರಾಜಿಡಿ ಹಾಗೂ ಸೆಂಟಿಮೆಂಟ್ ಸನ್ನಿವೇಶಗಳು ನಮ್ಮ ಚಿತ್ರದಲ್ಲಿದೆ. ಇದೇ ಆಗಸ್ಟ್ 19 ಸಿನಿರಸಿಕರ ಮಡಿಲಿಗೆ ನಮ್ಮ ಚಿತ್ರ ಹಾಕುತ್ತಿದ್ದೇವೆ. ನೋಡಿ ಹರಸಿ ಎಂದು ನಿರ್ದೇಶಕ ರಾಜು ಭಂಡಾರಿ ವಿನಂತಿಸಿದರು.
ನಿನ್ನೆ ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ಕಿರಣ್ ರಾಜ್ ಸಹ ತಮ್ಮ ಪಾತ್ರ ವಿವರಣೆ ನೀಡುತ್ತಾ, ಇಂತಹ ಒಳ್ಳಯ ತಂಡದಲ್ಲಿ ಅಭಿನಯಿಸಿದ್ದ ಸಂತೋಷ ನನಗಿದೆ. ನನ್ನ ಧಾರಾವಾಹಿಯ ಅಭಿಮಾನಿಗಳು ಈ ಚಿತ್ರವನ್ನು ನೋಡಿ ಗೆಲಿಸುತ್ತಾರೆ ಎಂದು ಕಿರಣ್ ರಾಜ್ ಹೇಳಿದರು.
‘ಸರಿಗಮಪ’ದಲ್ಲಿ ತಮ್ಮ ಗಾಯನದ ಮೂಲಕ ಮನೆಮಾತಾಗಿದ್ದ, ಶ್ರೀಹರ್ಷ ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡರು. ಈ  ಚಿತ್ರದಲ್ಲಿ ಬರೀ ನಟನೆಯಷ್ಟೇ ಅಲ್ಲ. ಒಂದು ಹಾಡನ್ನು ಹಾಡಿದ್ದೇನೆ ಎಂದು ಶ್ರೀಹರ್ಷ ಸಂತಸ ವ್ಯಕ್ತಪಡಿಸಿದರು.
ತೆಲುಗು - ತಮಿಳು ಸಿನಿಮಾಗಳಲ್ಲಿ ನಟಿಸಿ, ಇದೇ ಮೊದಲ ಬಾರಿಗೆ ಕನ್ನಡದಲ್ಲಿ ಅಭಿನಯಿಸುತ್ತಿರುವ ಪವಿತ್ರ ಕೋಟ್ಯಾನ್ ಹಾಗೂ ಅನಿಕ ರಮ್ಯ ಈ ಚಿತ್ರದ ನಾಯಕಿಯರು. ಆಗಸ್ಟ್ 19 ಚಿತ್ರ ಬಿಡುಗಡೆ ಮಾಡುತ್ತಿದ್ದೇವೆ. ಪ್ರೇಕ್ಷಕರು ನಮ್ಮ ಸಿನಿಮಾಗೆ ಗೆಲುವಿನ ಮಾಲೆ ತೊಡಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ನಿರ್ಮಾಪಕ ರಾಜಶೇಖರ್ ಶಿರಹಟ್ಟಿ.
new movie

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ