ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಬರಲ್ಲ ಜ್ಯೂ.ಎನ್ ಟಿಆರ್

Krishnaveni K

ಶನಿವಾರ, 20 ಜನವರಿ 2024 (09:38 IST)
ಹೈದರಾಬಾದ್: ಜನವರಿ 22 ರಂದು ಅಯೋಧ್ಯೆಯಲ್ಲಿ ಲೋಕಾರ್ಪಣೆಗೊಳ್ಳಲಿರುವ ರಾಮಮಂದಿರ ಕಾರ್ಯಕ್ರಮಕ್ಕೆ ಹಲವು ವಿಐಪಿಗಳನ್ನು ರಾಮ ಜನ್ಮಭೂಮಿ ಟ್ರಸ್ಟ್ ಆಹ್ವಾನಿಸಿದೆ.

ಸಿನಿಮಾ, ಕ್ರೀಡೆ, ಸಾಹಿತ್ಯ, ಉದ್ಯಮ, ವಿವಿಧ ಕಲೆಗಳು ಸೇರಿದಂತೆ ಹಲವಾರು ಗಣ್ಯರನ್ನು ಟ್ರಸ್ಟ್ ಆಹ್ವಾನಿಸಿದೆ. ಅವರಲ್ಲಿ ಆರ್ ಆರ್ ಆರ್ ಖ್ಯಾತಿಯ ನಟ ಜ್ಯೂ.ಎನ್ ಟಿಆರ್ ಕೂಡಾ ಒಬ್ಬರು.

ತೆಲುಗು ಸ್ಟಾರ್ ನಟ ಹಲವು ಬಾರಿ ದೇವರು, ಧರ್ಮದ ಬಗ್ಗೆ ಮಾತನಾಡಿ ತಮ್ಮ ದೈವ ಭಕ್ತಿ ಏನೆಂದು ಸಾಬೀತುಪಡಿಸಿದ್ದಾರೆ. ಆದರೆ ಇದೀಗ ರಾಮಮಂದಿರ ಕಾರ್ಯಕ್ರಮಕ್ಕೆ ಆಹ್ವಾನವಿದ್ದರೂ ಬರುತ್ತಿಲ್ಲ ಎನ್ನಲಾಗಿದೆ. ಇದಕ್ಕೆ ಕಾರಣವೂ ಇದೆ.

ಅದೇ ಸಂದರ್ಭದಲ್ಲಿ ಜ್ಯೂ.ಎನ್ ಟಿಆರ್ ತಮ್ಮ ಸಿನಿಮಾ ಕೆಲಸಗಳಲ್ಲಿ ಬ್ಯುಸಿಯಾಗಿದ್ದು, ಅನಿವಾರ್ಯವಾಗಿ ಕಾರ್ಯಕ್ರಮಕ್ಕೆ ಬರಲಾಗುತ್ತಿಲ್ಲ ಎಂದು ತಿಳಿದುಬಂದಿದೆ. ಸದ್ಯಕ್ಕೆ ತಾರಕ್ ದೇವರ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ಹೀಗಾಗಿ ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ