‘ಕಮಲ್ ಹಾಸನ್ ಮಾನಸಿಕ ಸ್ವಾಸ್ಥ್ಯ ಕಳೆದುಕೊಂಡಿದ್ದಾರೆ’

ಗುರುವಾರ, 17 ಆಗಸ್ಟ್ 2017 (09:50 IST)
ಚೆನ್ನೈ: ತಮಿಳು ಸೂಪರ್ ಸ್ಟಾರ್ ಇತ್ತೀಚೆಗೆ ಆಡಳಿತಾರೂಢ ಎಐಎಡಿಎಂಕೆ ಪಕ್ಷದ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದಾರೆ. ಈ ಬಗ್ಗೆ ತಮಿಳುನಾಡಿನ ಕಂದಾಯ ಸಚಿವರು ತಿರುಗೇಟು ನೀಡಿದ್ದಾರೆ.

 
‘ಕಮಲ್ ಹಾಸನ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಅವರ ಹೇಳಿಕೆಗಳನ್ನು ನೋಡಿ ನಾವು ಈ ತೀರ್ಮಾನಕ್ಕೆ ಬಂದಿದ್ದೇವೆ’ ಎಂದು ಕಂದಾಯ ಸಚಿವ ಆರ್ ಬಿ ಉದಯ್ ಕುಮಾರ್ ಹೇಳಿದ್ದಾರೆ.

‘ಅವರು ಏನನ್ನೋ ಹೇಳಲು ಹೋಗಿ ಇನ್ನೇನೋ ಹೇಳುತ್ತಿದ್ದಾರೆ. ಹೀಗಾಗಿ ಅವರು ಬಹುಶಃ ಮಾನಸಿಕ ಸ್ಥಿಮಿತ ಕಳೆದುಕೊಂಡಿರಬಹುದು ಎಂದು ನಾವು ಅಂದುಕೊಂಡಿದ್ದೇವೆ’ ಎಂದು ಉದಯ್ ಕುಮಾರ್ ಹೇಳಿದ್ದಾರೆ. ತಮಿಳುನಾಡು ಸಿಎಂ ಪಳನಿಸ್ವಾಮಿ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಈ ಕಾರಣಕ್ಕೆ ಸಿಎಂ ರಾಜೀನಾಮೆ ನೀಡಬೇಕು ಎಂದು ಕಮಲ್ ಟ್ವಿಟರ್ ನಲ್ಲಿ ಆಗ್ರಹಿಸಿದ್ದರು.

ಇದನ್ನೂ ಓದಿ.. ಯುವರಾಜ್ ಸಿಂಗ್, ಸುರೇಶ್ ರೈನಾ ತಂಡದಿಂದ ಕೈ ಬಿಟ್ಟಿದ್ದರ ರಹಸ್ಯ ಬಯಲು
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ