ಮದ್ರಾಸ್ ಹೈಕೋರ್ಟ್‌ನಿಂದ ನಟ ಕಮಲ್‌ಹಾಸನ್‌ಗೆ ರಿಲೀಫ್

ಗುರುವಾರ, 4 ಮೇ 2017 (17:09 IST)
ಮಹಾಭಾರತದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಕರಣದ ತನಿಖೆಗೆ ಮದ್ರಾಸ್ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದರಿಂದ ನಟ ಕಮಲ್‌ಹಾಸನ್‌ಗೆ ರಿಲೀಫ್ ದೊರೆತಂತಾಗಿದೆ.
 
ಮಹಿಳೆಯನ್ನು ಜೂಜಿಗೆ ಇಟ್ಟಿದ್ದ ಗ್ರಂಥವನ್ನು ನಾವು ಪೂಜಿಸುತ್ತೇವೆ ಎಂದು ನಟ ಕಮಲ್ ಹಾಸನ್ ನೀಡಿದ ಹೇಳಿಕೆಯನ್ನು ವಿರೋಧಿಸಿ ಹಿಂದೂ ಮಕ್ಕಳ್ ಕಚ್ಚಿ ಸಂಘಟನೆ ನ್ಯಾಯಾಲಯಕ್ಕೆ ದೂರು ದಾಖಲಿಸಿತ್ತು.
 
ಹಿಂದೂ ಮಕ್ಕಳ್ ಕಚ್ಚಿ ಸಂಘಟನೆ ಸಲ್ಲಿಸಿದ ದೂರನ್ನು ರದ್ದುಪಡಿಸುವಂತೆ ಕೋರಿ ಕಮಲ್ ಹಾಸನ್, ಮದ್ರಾಸ್ ಹೈಕೋರ್ಟ್ ಮೆಟ್ಟಲೇರಿದ್ದರು. ಇದೀಗ ಮದ್ರಾಸ್ ಹೈಕೋರ್ಟ್ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ