ನಿರ್ಮಾಪಕ ವಿಜಯ್ ಕುಮಾರ್ ಆಸ್ಪತ್ರೆಗೆ ದಾಖಲು

ಶನಿವಾರ, 7 ಜನವರಿ 2017 (09:04 IST)
ಹಿರಿಯ ನಿರ್ಮಾಪಕರಾದ ವಿಜಯ್ ಕುಮಾರ್ ಅವರು ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ವಾರವೇ ಅನಾರೋಗ್ಯದ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು. ಸ್ವಲ್ಪ ಮಟ್ಟಿಗೆ ಚೇತರಿಕೆ ಕಂಡಕಾರಣ ಆಸ್ಪತ್ರೆಯಿಂದ ಮನೆಗೆ ಬಂದಿದ್ದರು. 
 
ಸ್ಯಾಂಡಲ್‍ವುಡ್‍ನಲ್ಲಿ ನೂರಾರು ಕನಸುಗಳನ್ನು ಹೊತ್ತು ಸಾಗುತ್ತಿರುವ ನಿರ್ಮಾಪಕ. ಸಿಂಹಾದ್ರಿಯಸಿಂಹ-2 ಗೆ ಭರ್ಜರಿ ಸಿದ್ದತೆ ಮಾಡಿಕೊಳ್ತಿದ್ರು. ವಿಷ್ಣುವರ್ಧನ್ ಸ್ಮಾರಕ ನಿರ್ಮಾಣಕ್ಕೂ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು. 
 
ವಿಜಯ್‌ಕುಮಾರ್ ಹತ್ತಾರು ಯಶಸ್ವಿ ಚಿತ್ರಗಳನ್ನ ನಿರ್ಮಿಸಿದ್ದಾರೆ. ಮೌನಗೀತೆ, ಲಯನ್ ಜಗಪತಿ ರಾವ್, ಜಗದೇಕ ವೀರ, ಅವತಾರ ಪುರುಷ, ಸಿಂಹಾದ್ರಿಯ ಸಿಂಹ... ಅವುಗಳಲ್ಲಿ ಪ್ರಮುಖವಾದ ಕೆಲವು. ಟೂರಿಂಗ್ ಟಾಕೀಸ್ ಮಾಡಿ ಕೊಂಡು ಪ್ರದರ್ಶನಕಾರರಾಗಿ ಕಾರ್ಯ ನಿರ್ವಹಿಸಿದ ಇತಿಹಾಸ ಕೂಡಾ ಅವರ ಬೆನ್ನಿಗಿದೆ. ಇದಲ್ಲದೆ ಸುಮಾರು ನೂರಕ್ಕೂ ಹೆಚ್ಚು ಚಿತ್ರಗಳನ್ನ ವಿತರಣೆ ಮಾಡಿದ್ದಾರೆ. ಅವರು ಆದಷ್ಟು ಬೇಗ ಚೇತರಿಸಿಕೊಳ್ಳುವಂತಾಗಲಿ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ