ಕಾಶೀನಾಥ್ ನಿಧನಕ್ಕೆ ಚಿತ್ರರಂಗದ ಪ್ರತಿಕ್ರಿಯೆ ಏನು?

ಗುರುವಾರ, 18 ಜನವರಿ 2018 (10:06 IST)
ಬೆಂಗಳೂರು: ಹಿರಿಯ ನಟ, ನಿರ್ದೇಶಕ ಕಾಶೀನಾಥ್ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ನಟ ಜಗ್ಗೇಶ್, ನಿರ್ದೇಶಕ ತರುಣ್ ಸುಧೀರ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.
 

‘ಎಂಥಾ ದುರ್ದೈವ. ಅನುಭವ ಚಿತ್ರಕ್ಕೆ ನನಗೆ ಅವಕಾಶ ಕೊಡಿಸಲು ಛಾಯಾಗ್ರಾಹಕ ಸುಂದರನಾಥ ಸುವರ್ಣ ಅವರ ಬಳಿ ಕರೆದುಕೊಂಡು ಹೋಗಿದ್ದರು. ಆದರೆ ಅವಕಾಶ ಸಿಗಲಿಲ್ಲ. ಮುಂದೆ ಮನ್ಮಥ ಸಿನಿಮಾದಲ್ಲಿ ಜತೆಯಾಗಿ ನಟಿಸಿದೆ. ತುಂಬಾ ಸಾಧು ಸ್ವಭಾವದ ಮನುಷ್ಯ. ಯಾರಿಗೂ ನೋಯಿಸದ ಮನುಷ್ಯ. ಇಷ್ಟು ಬೇಗ ಹೋಗಿದ್ದು ಬೇಸರ ತರಿಸಿದೆ’ ಎಂದು ಜಗ್ಗೇಶ್ ಟ್ವೀಟ್ ಮಾಡಿದ್ದಾರೆ.

ಕೊನೆಯದಾಗಿ ಕಾಶೀನಾಥ್ ಅಭಿನಯಿಸಿದ ಚೌಕ ಚಿತ್ರದ ನಿರ್ದೇಶಕ ತರುಣ್ ಸುಧೀರ್ ಕೂಡಾ ನೋವಿನಿಂದಲೇ ಪ್ರತಿಕ್ರಿಯಿಸಿದ್ದು, ಏನು ಹೇಳಬೇಕೆಂದೇ ತೋಚುತ್ತಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ