ವಿಜಯ್ ಕಿರಗಂದೂರು ತವರಿಗೆ ಭೇಟಿ ಕೊಟ್ಟ ಕೆಜಿಎಫ್ 2 ತಂಡ

ಬುಧವಾರ, 13 ಏಪ್ರಿಲ್ 2022 (10:33 IST)
ಬೆಂಗಳೂರು: ನಾಳೆಯಿಂದ ವಿಶ್ವದಾದ್ಯಂತ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾ ತಂಡ ನಿರ್ಮಾಪಕ ವಿಜಯ್ ಕಿರಗಂದೂರು ತವರಿಗೆ ಭೇಟಿ ಕೊಟ್ಟಿದೆ.

ವಿಜಯ್ ಕಿರಗಂದೂರು ಜೊತೆಗೆ ರಾಕಿಂಗ್ ಸ್ಟಾರ್ ಯಶ್, ಪ್ರಶಾಂತ್ ನೀಲ್ ಕೂಡಾ ಮೈಸೂರಿಗೆ ಭೇಟಿ ನೀಡಿದ್ದಾರೆ. ವಿಜಯ್ ಹಿರಿಯರ ಮನೆಗೆ ಭೇಟಿ ಕೊಟ್ಟು ಆಶೀರ್ವಾದ ಪಡೆದಿದ್ದಲ್ಲದೆ, ಬಳಿಕ ನಿಮಿಷಾಂಬ ದೇವಾಲಯದಲ್ಲಿ ಪೂಜೆ ಸಲ್ಲಿಸಿದೆ.

ಈ ಮೊದಲು ಯಶ್ ಧರ್ಮಸ್ಥಳ, ತಿರುಪತಿ, ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ವಿವಿಧ ದೇವಾಲಯಗಳಿಗೆ ಭೇಟಿ ನೀಡಿ ತಮ್ಮ ಚಿತ್ರದ ಯಶಸ್ಸಿಗೆ ದೇವರ ಮೊರೆ ಹೋಗಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ