ಸಾಮಾಜಿಕ ಅಂತರಕ್ಕೆ ಪ್ರಾಮುಖ್ಯತೆ ಕೊಡದ ಅಭಿಮಾನಿ ಸಂಘಕ್ಕೆ ಕಿಚ್ಚ ಸುದೀಪ್ ಕಿವಿ ಮಾತು

ಸೋಮವಾರ, 27 ಏಪ್ರಿಲ್ 2020 (09:14 IST)
ಬೆಂಗಳೂರು: ಲಾಕ್ ಡೌನ್ ವೇಳೆ ಬಡವರಿಗೆ ನಿತ್ಯದ ಊಟಕ್ಕೆ ತೊಂದರೆಯಾಗದಿರಲಿ ಎಂದು ಕಿಚ್ಚ ಸುದೀಪ್ ಅಭಿಮಾನಿಗಳ ಬಳಗ ಆಹಾರ ಒದಗಿಸುವ ಉತ್ತಮ ಕೆಲಸ ಮಾಡುತ್ತಿದೆ. ಆದರೆ ಈ ನಡುವೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದಕ್ಕೆ ಕಿಚ್ಚ ಕಿವಿ ಮಾತು ಹೇಳಿದ್ದಾರೆ.


ಹಾಸನದಲ್ಲಿ ಬಡವರಿಗೆ ಊಟದ ವ್ಯವಸ್ಥೆ ಮಾಡಿದ್ದ ಕಿಚ್ಚನ ಅಭಿಮಾನಿಗಳ ಬಳಗ ಈ ವಿಡಿಯೋವನ್ನು ಟ್ವಿಟರ್ ನಲ್ಲಿ ಪ್ರಕಟಿಸಿ
ಕಿಚ್ಚನ ಗಮನ ಸೆಳೆದಿದ್ದರು. ಆದರೆ ಈ ವಿಡಿಯೋದಲ್ಲಿ ಜನರು ಗುಂಪು ಗುಂಪಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಆಹಾರ ಪೊಟ್ಟಣ ಪಡೆಯಲು ಬರುತ್ತಿದ್ದಾರೆ.

ಇದನ್ನು ಗಮನಿಸಿದ ಕಿಚ್ಚ, ಎಲ್ಲರೂ ಅಂತರ ಕಾಯ್ದುಕೊಳ್ಳುವುದನ್ನು ಖಚಿತಪಡಿಸಿಕೊಳ್ಳಿ. ಅವರ ಸುರಕ್ಷತೆಗೆ ಇದು ತುಂಬಾ ಮುಖ್ಯ. ಇದನ್ನು ದಯವಿಟ್ಟು ಫಾಲೋ ಮಾಡಿ. ಈ ರೀತಿ ಆಹಾರ ಒದಗಿಸುವ ಕೆಲಸ ಮಾಡುತ್ತಿರುವ ನಿಮಗೆ ಅಭಿನಂದನೆಗಳು ಎಂದು ಕಿಚ್ಚ ಕಿವಿ ಮಾತು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ