ಕೇರಳದಲ್ಲಿ ವಿಕ್ರಾಂತ್ ರೋಣನಿಗೆ ಭರ್ಜರಿ ಸ್ವಾಗತ

ಶುಕ್ರವಾರ, 24 ಜೂನ್ 2022 (17:07 IST)
ಕೊಚ್ಚಿ: ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾ ಪ್ರಚಾರಕ್ಕಾಗಿ ಕಿಚ್ಚ ಸುದೀಪ್ ಇಂದು ಕೇರಳಕ್ಕೆ ಭೇಟಿ ಕೊಟ್ಟಿದ್ದಾರೆ.

ಇಂದು ಕೇರಳದಲ್ಲಿ ಪ್ರೆಸ್ ಮೀಟ್ ನಲ್ಲಿ ಭಾಗಿಯಾಗಲು ಕೊಚ್ಚಿಗೆ ಬಂದಿಳಿದಿದ್ದಾರೆ. ಈ ವೇಳೆ ಕಿಚ್ಚನಿಗೆ ಅಲ್ಲಿನ ಅಭಿಮಾನಿಗಳು ಭರ್ಜರಿ ಸ್ವಾಗತ ಕೋರಿದ್ದಾರೆ.

ಕೇರಳದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾದ ಬಳಿಕ ಚಿತ್ರತಂಡ ಚೆನ್ನೈಗೆ ತೆರಳಲಿದೆ. ಕಿಚ್ಚ ಸುದೀಪ್ ಗೆ ನಿರ್ಮಾಪಕ ಜ್ಯಾಕ್ ಮಂಜು, ನಿರ್ದೇಶಕ ಅನೂಪ್ ಭಂಡಾರಿ, ನಟಿ ನೀತಾ ಅಶೋಕ್ ಸೇರಿದಂತೆ ಚಿತ್ರತಂಡ ಸಾಥ್ ಕೊಟ್ಟಿದೆ. ವಿಕ್ರಾಂತ್ ರೋಣ ಜುಲೈ 28 ರಂದು ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ನಿನ್ನೆಯಷ್ಟೇ ಚಿತ್ರದ ಟ್ರೈಲರ್ ಬಿಡುಗಡೆಯಾಗಿದ್ದು ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ