ರಾಜಕೀಯ ಸೇರ್ಪಡೆ ವದಂತಿ ಬೆನ್ನಲ್ಲೇ ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ

ಬುಧವಾರ, 5 ಏಪ್ರಿಲ್ 2023 (09:10 IST)
Photo Courtesy: Twitter
ಬೆಂಗಳೂರು: ಕಿಚ್ಚ ಸುದೀಪ್ ಇಂದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳ ಬೆನ್ನಲ್ಲೇ ಅವರಿಗೆ ಎರಡು ಬೆದರಿಕೆ ಪತ್ರಗಳು ಬಂದಿದೆ ಎನ್ನಲಾಗಿದೆ.

ಕಿಚ್ಚ ಸುದೀಪ್ ಆಪ್ತ ಜ್ಯಾಕ್ ಮಂಜುಗೆ ಬೆದರಿಕೆ ಪತ್ರ ತಲುಪಿದೆ ಎನ್ನಲಾಗಿದ್ದು, ಇದರಲ್ಲಿ ಸುದೀಪ್ ಗೆ ಸಂಬಂಧಿಸಿದ ವಿಡಿಯೋ ಲೀಕ್ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ.

ಅಲ್ಲದೆ, ಸುದೀಪ್ ಅವಾಚ್ಯ ಶಬ್ಧಗಳಿಂದ ನಿಂದಿಸಲಾಗಿದೆ ಎನ್ನಲಾಗಿದೆ. ಈ ಸಂಬಂಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸದ್ಯಕ್ಕೆ ಪತ್ರ ಬರೆದಿರುವವರು ಯಾರು ಎಂದು ತನಿಖೆ ನಡೆಸಲಾಗುತ್ತಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ