ಕೊಡಗಿನ ನಂತರ ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆ ಧ್ವನಿಯೆತ್ತಿದ ಕಿಚ್ಚ ಸುದೀಪ್

ಸೋಮವಾರ, 17 ಜೂನ್ 2019 (08:39 IST)
ಬೆಂಗಳೂರು: ಕೊಡಗಿನಲ್ಲಿ ತುರ್ತು ಆಸ್ಪತ್ರೆ ನಿರ್ಮಿಸಬೇಕೆಂದು ಬೇಡಿಕೆಯಿಟ್ಟು ಸೆಲೆಬ್ರಿಟಿಗಳು, ಜನ ಸಾಮಾನ್ಯರು ಸೋಷಿಯಲ್ ಮೀಡಿಯಾದಲ್ಲಿ ಅಭಿಯಾನ ಆರಂಭಿಸಿದ ಬೆನ್ನಲ್ಲೇ ಉತ್ತರ ಕರ್ನಾಟಕದಲ್ಲೂ ಇಂತಹದ್ದೊಂದು ಆಸ್ಪತ್ರೆ ನಿರ್ಮಿಸಬೇಕೆಂದು ಕಿಚ್ಚ ಸುದೀಪ್ ಬೇಡಿಕೆಯಿಟ್ಟಿದ್ದಾರೆ.


ಕೊಡಗಿನಲ್ಲಿ ಆಸ್ಪತ್ರೆ ನಿರ್ಮಿಸಲು ತಮ್ಮಿಂದಾದ ನೆರವು ನೀಡುವುದಾಗಿ ಸುದೀಪ್ ಘೋಷಿಸಿದ್ದರು. ಅದರ ಬೆನ್ನಲ್ಲೇ ಇದೀಗ ಉತ್ತರ ಕರ್ನಾಟಕ ಮತ್ತು ರಾಜ್ಯದ ಇನ್ನೂ ಕೆಲವು ಕಡೆ ಇಂತಹ ಸುಸಜ್ಜಿತ ಆಸ್ಪತ್ರೆ ನಿರ್ಮಿಸಬೇಕಾದ ಅಗತ್ಯವಿದೆ. ಅದಕ್ಕಾಗಿ ತಕ್ಕ ಕ್ರಮ ಕೈಗೊಳ್ಳುವಂತೆ ಸಿಎಂ ಕುಮಾರಸ್ವಾಮಿಗೆ ಸುದೀಪ್ ಮನವಿ ಮಾಡಿದ್ದಾರೆ.

ಕೊಡಗು ಮಾತ್ರವಲ್ಲದೆ, ಉತ್ತರ ಕರ್ನಾಟಕದಲ್ಲೂ ಇದೇ ಪರಿಸ್ಥಿತಿ ಇದೆ ಎಂದು ನನಗೆ ತಿಳಿದುಬಂತು. ಅಲ್ಲದೆ ರಾಜ್ಯದ ಇನ್ನೂ ಹಲವೆಡೆ ತುರ್ತು ಆಸ್ಪತ್ರೆಗಳ ನಿರ್ಮಾಣ ಮಾಡಬೇಕಾದ ಅಗತ್ಯವಿದೆ. ಇದಕ್ಕಾಗಿ ತಕ್ಷಣವೇ ಸ್ಪಂದಿಸಿ ಕ್ರಮ ಕೈಗೊಳ್ಳಬೇಕೆಂದು ಸಿಎಂ ಕುಮಾರಸ್ವಾಮಿ ವಿನಮ್ರವಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಕಿಚ್ಚ ಸುದೀಪ್ ಹೇಳಿಕೊಂಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ