ಫ್ಯಾನ್ಸ್ ಆಕ್ಷೇಪದ ಬೆನ್ನಲ್ಲೇ ವಿಕ್ರಾಂತ್ ರೋಣ ಬಗ್ಗೆ ಟ್ವೀಟ್ ಮಾಡಿದ ಕಿಚ್ಚ ಸುದೀಪ್

ಗುರುವಾರ, 14 ಜುಲೈ 2022 (16:10 IST)
ಬೆಂಗಳೂರು: ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳಿರುವಾಗ ಬಿಗ್ ಬಾಸ್ ಕನ್ನಡ ಶೋ ಬಗ್ಗೆ ಕಿಚ್ಚ ಸುದೀಪ್ ಟ್ವೀಟ್ ಮಾಡಿದ್ದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿತ್ತು.

ವಿಕ್ರಾಂತ್ ರೋಣ ಜುಲೈ 28 ರಂದು ವಿಶ್ವದಾದ್ಯಂತ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಈ ಸಿನಿಮಾದ ಬಗ್ಗೆ ಫ್ಯಾನ್ಸ್ ಎದಿರು ನೋಡುತ್ತಿರುವಾಗ ಸಿನಿಮಾ ಬಗ್ಗೆ ಮಾತನಾಡುವುದನ್ನು ಬಿಟ್ಟು ಬಿಗ್ ಬಾಸ್ ಶೋ ಬಗ್ಗೆ ಅಪ್ ಡೇಟ್ ಕೊಟ್ಟಿದ್ದಕ್ಕೆ ಅಭಿಮಾನಿಗಳು ಆಕ್ಷೇಪಿಸಿದ್ದರು.

ಇದರ ಬೆನ್ನಲ್ಲೇ ಸುದೀಪ್ ಇಂದು ವಿಕ್ರಾಂತ್ ರೋಣ ಮೇಕಿಂಗ್ ಝಲಕ್ ಒಂದರ ವಿಡಿಯೋವನ್ನು ಪ್ರಕಟಿಸಿದ್ದಾರೆ. ವಿಕ್ರಾಂತ್ ರೋಣ ಕ್ಯಾಮರಾ ಮ್ಯಾನ್ ವಿಲಿಯಮ್ ಡೇವಿಡ್ ಅವರ ಕೆಲಸದ ವೈಖರಿ ಬಗ್ಗೆ ವಿಡಿಯೋ ಪ್ರಕಟಿಸಿ ಅಭಿಮಾನಿಗಳ ಖುಷಿಗೆ ಕಾರಣರಾಗಿದ್ದಾರೆ ಸುದೀಪ್.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ