ದಿಡೀರ್ ಆಗಿ ಥಿಯೇಟರ್ ನಿಂದ ಪ್ರದರ್ಶನ ಹಿಂಪಡೆದ ಕೃಷ್ಣ ಟಾಕೀಸ್ ಸಿನಿಮಾ

ಮಂಗಳವಾರ, 20 ಏಪ್ರಿಲ್ 2021 (09:03 IST)
ಬೆಂಗಳೂರು: ನಟ ಅಜೇಯ್ ರಾವ್ ಅಭಿನಯದ ‘ಕೃಷ್ಣ ಟಾಕೀಸ್’ ಸಿನಿಮಾ ಇದೇ ಶುಕ್ರವಾರ ತೆರೆಗೆ ಬಂದಿತ್ತು. ಆದರೆ ಈಗ ಚಿತ್ರತಂಡ ದಿಡೀರ್ ಆಗಿ ಪ್ರದರ್ಶನ ಹಿಂಪಡೆದಿದೆ.


ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದರಿಂದ ಜನರ ಸುರಕ್ಷತೆ ದೃಷ್ಟಿಯಲ್ಲಿಟ್ಟುಕೊಂಡು ಸಿನಿಮಾ ಪ್ರದರ್ಶನ ಸದ್ಯಕ್ಕೆ ಥಿಯೇಟರ್ ನಿಂದ ಹಿಂಪಡೆಯುತ್ತಿರುವುದಾಗಿ ಚಿತ್ರತಂಡ ಪ್ರಕಟಿಸಿದೆ.

ಕೊರೋನಾ ಇಳಿಮುಖವಾದ ಬಳಿಕ ಮತ್ತೆ ಥಿಯೇಟರ್ ನಲ್ಲಿ ಸಿನಿಮಾ ಮರು ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ. ಈಗಾಗಲೇ ಹಲವು ಸಿನಿಮಾಗಳು ಕೊರೋನಾ ಕಾರಣದಿಂದ ಸದ್ಯಕ್ಕೆ ಥಿಯೇಟರ್ ನಲ್ಲಿ ಬಿಡುಗಡೆ ಮಾಡದೇ ಇರಲು ನಿರ್ಧರಿಸಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ