ಹಣೆಯಲ್ಲಿ ಕುಂಕುಮ, ರೇಷ್ಮೆ ಪಂಚೆ: ಕಲ್ಟ್ ಸಿನಿಮಾ ಮುಹೂರ್ತದಲ್ಲಿ ಮಿಂಚಿದ ಝೈದ್ ಖಾನ್
ಬನಾರಸ್ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಝೈದ್ ಖಾನ್ ಅವರು ಇದೀಗ ಅವರ ಎರಡನೇ ಸಿನಿಮಾ ಅಧಿಕೃತವಾಗಿ ಅನೌನ್ಸ್ ಮಾಡಲಾಗಿದೆ. ರಂಗಾಯಣ ರಘು, ಅಚ್ಯುತ ಕುಮಾರ್ ಸೇರಿದಂತೆ ದೊಡ್ಡ ತಾರಾ ಬಳಗವನ್ನು ಹೊಂದಿದೆ.
ಕಲ್ಟಿಸಂ ಎಂಬ ಶಬ್ದವನ್ನು ಈಗಿನ ಯುವಜನತೆ ಕಲ್ಟ್ ಎಂದು ಹೆಚ್ಚಾಗಿ ಸಂಬೋಧಿಸುತ್ತಾರೆ. ಹಾಗಾಗಿ ಯವಜನತೆಗೆ ಹತ್ತಿರವಾಗಿರುವ ಕಥೆಯುಳ್ಳ ಈ ಚಿತ್ರಕ್ಕೆ ಕಲ್ಟ್ ಎಂದು ಶೀರ್ಷಿಕೆಯಿಟ್ಟಿರುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.