ಕೊರೋನಾ ಪರಿಹಾರಕ್ಕೆ ಪ್ರಿನ್ಸ್ ಮಹೇಶ್ ಬಾಬು, ಪ್ರಭಾಸ್ ನೀಡಿದ ದೇಣಿಗೆ ಕೇಳಿದರೆ ಶಾಕ್ ಆಗುತ್ತೀರಿ!

ಶುಕ್ರವಾರ, 27 ಮಾರ್ಚ್ 2020 (09:35 IST)
ಹೈದರಾಬಾದ್: ಕೊರೋನಾವೈರಸ್ ತಡೆಗೆ ಸರ್ಕಾರ ಕೈಗೊಳ್ಳುತ್ತಿರುವ ಕ್ರಮಗಳಿಗೆ ಕೈ ಜೋಡಿಸಲು ಮುಂದಾಗಿರುವ ಕೆಲವು ಸೆಲೆಬ್ರಿಟಿಗಳು ಭಾರೀ ಮೊತ್ತದ ದೇಣಿಗೆ ನೀಡುವ ಮೂಲಕ ಸುದ್ದಿಯಾಗಿದ್ದಾರೆ.


ಅದರಲ್ಲೂ ವಿಶೇಷವಾಗಿ ತೆಲುಗು ಸ್ಟಾರ್ ನಟರು ತಮ್ಮ ರಾಜ್ಯ ಸರ್ಕಾರದ ಪರಿಹಾರ ನಿಧಿಗೆ ಭಾರೀ ಮೊತ್ತದ ದೇಣಿಗೆ ನೀಡಿ ಸುದ್ದಿಯಾಗಿದ್ದಾರೆ. ಪವನ್ ಕಲ್ಯಾಣ್, ಬಾಲಕೃಷ್ಣ ಆಂಧ್ರ, ತೆಲಂಗಾಣದ ಸಿಎಂ ಪರಿಹಾರ ನಿಧಿಗೆ 50 ಲಕ್ಷ ರೂ. ಪರಿಹಾರ ನೀಡಿದ್ದರು.

ಅವರದೇ ಹಾದಿಯಲ್ಲಿ ನಡೆದ ಪ್ರಿನ್ಸ್ ಮಹೇಶ್ ಬಾಬು ಮತ್ತು ರೆಬಲ್ ಸ್ಟಾರ್ ಪ್ರಭಾಸ್ ತೆಲಂಗಾಣ ಮತ್ತು ಆಂಧ್ರ ಸಿಎಂ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ನೀಡಿ ಭಾರೀ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ