ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಸುಂದರ್ ಪಿ. ಗೌಡ ಗೆ ಜಾಮೀನು

ಶುಕ್ರವಾರ, 1 ಜೂನ್ 2018 (13:43 IST)
ಬೆಂಗಳೂರು : ಮಾಸ್ತಿಗುಡಿ ಚಿತ್ರದ ಚಿತ್ರೀಕರಣ  ವೇಳೆ ಸಹನಟರಿಬ್ಬರ ಸಾವನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದ ನಿರ್ಮಾಪಕ ಸುಂದರ್ ಪಿ. ಗೌಡ  ಅವರು ಕೋರ್ಟ್ ಮುಂದೆ ಹಾಜರಾಗಿದ್ದು, ಇದೀಗ ಕೋರ್ಟ್  ನಿರ್ಮಾಪಕ ಸುಂದರ್ ಪಿ. ಗೌಡ  ಅವರಿಗೆ ಜಾಮೀನು ಮಂಜೂರು ಮಾಡಿದೆ.


ನಿರ್ಮಾಪಕ ಸುಂದರ್ ಪಿ. ಗೌಡ  ಅವರು ಮೇ 30 ರಂದು ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದ ಹಿನ್ನಲೆಯಲ್ಲಿ ಬಂಧನದ ಭೀತಿಯಿಂದ ಪರಾರಿಯಾಗಿದ್ದರು. ಆದರೆ ಇದೀಗ  ಅವರು ರಾಮನಗರದ ಸೆಷನ್ಸ್ ಕೋರ್ಟ್ ಗೆ ಶರಣಾದ ಕಾರಣ ನ್ಯಾಯಾಧೀಶ ಗೋಪಾಲ್ ರೈ ಅವರು ಜಾಮೀನು ಮಂಜೂರು ಮಾಡಿದ್ದಾರೆ. ಜೊತೆಗೆ ಕೋರ್ಟ್ ಗೆ ಶರಣಾದ ಚಿತ್ರದ ನಿರ್ದೇಶಕ ನಾಗ ಶೇಖರ್ ಹಾಗೂ ಸಾಹಸ ನಿರ್ದೇಶಕ ರವಿವರ್ಮ ಅವರಿಗೂ ಕೂಡ ಜಾಮೀನು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ