ಲೈಂಗಿಕ ದೌರ್ಜನ್ಯ ಪ್ರಕರಣದ ಅವಮಾನ ತಾಳಲಾರದೇ ವ್ಯಕ್ತಿ ಮಾಡಿದ್ದೇನು?

ಶುಕ್ರವಾರ, 9 ಏಪ್ರಿಲ್ 2021 (07:22 IST)
ಹೈದರಾಬಾದ್ : ತನ್ನ ಮೇಲೆ ಮಹಿಳೆಯೊಬ್ಬಳು ಲೈಂಗಿಕ ದೌರ್ಜನ್ಯದ ಪ್ರಕರಣ ದಾಖಲಿಸಿದ ಹಿನ್ನಲೆಯಲ್ಲಿ 20 ವರ್ಷದ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭದ್ರಾಡಿ-ಕೊಥಗುಡೆಮ್ ಜಿಲ್ಲೆಯಲ್ಲಿ ನಡೆದಿದೆ.

ಸಂತ್ರಸ್ತನ ಸಹೋದರ ಸಂಬಂಧಿ ಯುವತಿ  ಸಂತ್ರಸ್ತ ಹಾಗೂ ಆತನ ಸ್ನೇಹಿತ ತನಗೆ ಬಾಲ್ಯದಿಂದಲೂ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆಕೆ ಆರೋಪಿಸಿ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದರಿಂದ ಅವಮಾನಗೊಂಡ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ