ಸಿನಿಮಾ ನಿರ್ದೇಶಕ ಸೂರ್ಯಪ್ರಕಾಶ್‌ ನಿಧನ: ಶರತ್ ದಂಪತಿ ತೀವ್ರ ಸಂತಾಪ

Sampriya

ಸೋಮವಾರ, 27 ಮೇ 2024 (18:07 IST)
Photo Courtesy X
ಚೆನ್ನೈ: ತಮಿಳು ಹಿರಿಯ ನಿರ್ದೇಶಕ ಸೂರ್ಯ ಪ್ರಕಾಶ್ ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾಲಿವುಡ್‌ನಲ್ಲಿ ಮಾಯಿ, ಮಾಣಿಕ್ಕಂ ಮತ್ತು ದಿವಾನ್ ಚಿತ್ರಗಳಿಗೆ ಹೆಚ್ಚು ಹೆಸರುವಾಸಿಯಾಗಿದ್ದರು. ಅವರಿಗೆ 56 ವರ್ಷ ವಯಸ್ಸಾಗಿತ್ತು.

ಹಿರಿಯ ನಟ ಶರತ್‌ಕುಮಾರ್ ಮತ್ತು ರಾಧಿಕಾ ಶರತ್‌ ಕುಮಾರ್ ಅವರು ಸೂರ್ಯಪ್ರಕಾಶ್‌ ಅವರ ಅಕಾಲ ನಿಧನಕ್ಕೆ ತಮ್ಮ ಸಾಮಾಜಿಕ ಜಾಲತಾಣ ಮೂಲಕ ಸಂತಾಪ ಸೂಚಿಸಿದ್ದಾರೆ.

ಮಾಯಿ ಮತ್ತು ದಿವಾನ್ ಚಿತ್ರಗಳನ್ನು ನಿರ್ದೇಶಿಸಿದ ನನ್ನ ಆತ್ಮೀಯ ಸ್ನೇಹಿತ ಸೂರ್ಯ ಪ್ರಕಾಶ್ ಅವರ ನಿಧನದ ಸುದ್ದಿ ಕೇಳಿ ಆಘಾತ ಮತ್ತು ನೋವಾಯಿತು. ನಿನ್ನೆಯಷ್ಟೇ ಅವರ ಜತೆ ಮಾತನಾಡಿದ್ದೆ. ಅವರ ಹಠಾತ್ ನಿಧನ ತುಂಬ ದುಃಖ ಉಂಟುಮಾಡಿದೆ ಎಂದು ನಟ ಶರತ್‌ಕುಮಾರ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಸೂರ್ಯ ಪ್ರಕಾಶ್‌ ಅದ್ಭುತ ಮತ್ತು ಪ್ರತಿಭಾವಂತ ವ್ಯಕ್ತಿ, ಉತ್ತಮ ಬರಹಗಾರ, ಹಾಸ್ಯದ ಅಭಿರುಚಿಯುಳ್ಳ ನಿರ್ದೇಶಕ. ನಟ ಶರತ್‌ಕುಮಾರ್ ಅವರ ಆತ್ಮೀಯ ಸ್ನೇಹಿತ. ಅವರ ಕುಟುಂಬ ಮತ್ತು ಸಿನಿಮಾ ಉದ್ಯಮಕ್ಕೆ ದೊಡ್ಡ ನಷ್ಟ ಎಂದು ರಾಧಿಕಾ ಶರತ್‌ಕುಮಾರ್ ಬರೆದುಕೊಂಡಿದ್ದಾರೆ.

ಸೂರ್ಯ ಪ್ರಕಾಶ್ ಅವರು ರಾಜ್‌ಕಿರಣ್‌ ಅವರ ಮಾಣಿಕ್ಕಂ ಚಿತ್ರದ ಮೂಲಕ ನಿರ್ದೇಶಕರಾಗಿ ಪದಾರ್ಪಣೆ ಮಾಡಿದರು. ನಂತರ ಅವರು ಶರತ್‌ಕುಮಾರ್ ಮತ್ತು ಮೀನಾ ಅವರಿಗೆ ಮಾಯಿ ಸಿನಿಮಾಗಾಗಿ ನಿರ್ದೇಶನ ಮಾಡಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ