ಕುರುಕ್ಷೇತ್ರ ಅಡಿಯೋ ರಿಲೀಸ್ ಗಾಗಿ ಬೆಂಗಳೂರಲ್ಲೇ ನಿಂತ ಶಾಸಕ ಮುನಿರತ್ನ

ಭಾನುವಾರ, 7 ಜುಲೈ 2019 (09:49 IST)
ಬೆಂಗಳೂರು: ಕುರುಕ್ಷೇತ್ರ ಸಿನಿಮಾ ಅಡಿಯೋ ರಿಲೀಸ್ ಕಾರ್ಯಕ್ರಮ ಇಂದು ನಿಗದಿಯಾಗಿರುವ ಕಾರಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮುನಿರತ್ನ ಇಂದೂ ಬೆಂಗಳೂರಿನಲ್ಲಿಯೇ ಉಳಿದಿದ್ದಾರೆ.


ರಾಜೀನಾಮೆ ಸಲ್ಲಿಸಿರುವ ಶಾಸಕರ ಪೈಕಿ ಮುನಿರತ್ನ ಮತ್ತು ರಾಮಲಿಂಗಾರೆಡ್ಡಿ ಹೊರತುಪಡಿಸಿ ಉಳಿದ ಶಾಸಕರು ಈಗಾಗಲೇ ಮುಂಬೈಗೆ ತಲುಪಿದ್ದಾರೆ ಎನ್ನಲಾಗಿದೆ.

ಆದರೆ ಇಂದು ಸಂಜೆ ಅರಮನೆ  ಮೈದಾನದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಕುರುಕ್ಷೇತ್ರ ಸಿನಿಮಾ ಅಡಿಯೋ ರಿಲೀಸ್‍ ಕಾರ್ಯಕ್ರಮ ಏರ್ಪಾಡಾಗಿದೆ. ಹೀಗಾಗಿ ಈ ಸಿನಿಮಾದ ನಿರ್ಮಾಪಕರಾಗಿರುವ ಮುನಿರತ್ನ ಬೆಂಗಳೂರಿನಲ್ಲಿಯೇ ಉಳಿದುಕೊಂಡಿದ್ದು, ಇದಾದ ಬಳಿಕ ಇತರ ಶಾಸಕರನ್ನು ಕೂಡಿಕೊಳ್ಳುವ ಸಾಧ್ಯತೆಯಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ